ಆ್ಯಪ್ನಗರ

ಸರಣಿ ಅಪಘಾತ: ಐವರಿಗೆ ಗಾಯ

ಐವರಿಗೆ ಗಾಯ ವಿಕ ಸುದ್ದಿಲೋಕ ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ) ಬೆಂಗಳೂರು - ಮೈಸೂರು ಹೆದ್ದಾರಿ ತಾಲೂಕಿನ ಗಣಂಗೂರು ಬಳಿ ವಾಹನಗಳ ಸರಣಿ ಅಪಘಾತ ಸಂಭವಿಸಿದ್ದು, ಐವರು ...

Vijaya Karnataka 24 Apr 2019, 5:00 am
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ) : ಬೆಂಗಳೂರು - ಮೈಸೂರು ಹೆದ್ದಾರಿ ತಾಲೂಕಿನ ಗಣಂಗೂರು ಬಳಿ ವಾಹನಗಳ ಸರಣಿ ಅಪಘಾತ ಸಂಭವಿಸಿದ್ದು, ಐವರು ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
Vijaya Karnataka Web accident near srirangapattana five people injured
ಸರಣಿ ಅಪಘಾತ: ಐವರಿಗೆ ಗಾಯ


ಕಾರು, ಕೆಎಸ್‌ಆರ್‌ಟಿಸಿ ಬಸ್‌, ಲಾರಿ, ಬುಲೆರೋ ವಾಹನ ಒಂದಕ್ಕೊಂದು ಡಿಕ್ಕಿಯಾಗಿವೆ. ಮಂಡ್ಯ ಕಡೆಯಿಂದ ಚಲಿಸುತ್ತಿದ್ದ ಕಾರು ಡಿವೈಡರ್‌ ಬಳಿ ತಿರುವು ಪಡೆದುಕೊಳ್ಳಲು ನಿಧಾನ ಮಾಡಿದಾಗ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್‌ ಹಿಂಭಾಗ ಸರತಿ ಸಾಲಿನಲ್ಲಿ ಚಲಿಸುತ್ತಿದ್ದ ಲಾರಿ, ಬುಲೆರೋ ವಾಹನಗಳು ಕೂಡ ಒಂದಕ್ಕೊಂದು ಡಿಕ್ಕಿಯಾಗಿ ಜಖಂಗೊಂಡಿವೆ. ಇದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ಪುನೀತ್‌ ವಾಹನ ದಟ್ಟಣೆ ತೆರವುಗೊಳಿಸಿದರು. ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಐವರಿಗೆ ಸಣ್ಣ, ಪುಟ್ಟ ಗಾಯವಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ