ಆ್ಯಪ್ನಗರ

ಕಾರುಗಳ ಡಿಕ್ಕಿ: ಓರ್ವ ಸಾವು, 7 ಮಂದಿಗೆ ಗಾಯ

ವಿಕಸುದ್ದಿಲೋಕ ಶ್ರೀರಂಗಪಟ್ಟಣ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ನಗರಕ್ಕೆ ನೀರೆತ್ತುವ ಕಾರ್ಯಾಗಾರ ಎದುರು ಗುರುವಾರ ತಡರಾತ್ರಿ ಕಾರಿಗೆ ಮತ್ತೊಂದು ಕಾರು ಹಿಂದಿನಿಂದ ...

Vijaya Karnataka 2 Feb 2019, 5:00 am
ಶ್ರೀರಂಗಪಟ್ಟಣ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ನಗರಕ್ಕೆ ನೀರೆತ್ತುವ ಕಾರ್ಯಾಗಾರ ಎದುರು ಗುರುವಾರ ತಡರಾತ್ರಿ ಕಾರಿಗೆ ಮತ್ತೊಂದು ಕಾರು ಹಿಂದಿನಿಂದ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
Vijaya Karnataka Web accident one person death 7 injured
ಕಾರುಗಳ ಡಿಕ್ಕಿ: ಓರ್ವ ಸಾವು, 7 ಮಂದಿಗೆ ಗಾಯ


ಗಂಭೀರವಾಗಿ ಗಾಯಗೊಂಡಿದ್ದ ಚನ್ನಪಟ್ಟಣದ ಕಿರಣ(28) ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಅದೇ ಕಾರಿನಲ್ಲಿ ಚಲಿಸುತ್ತಿದ್ದ ನಿಂಗರಾಜು, ರವಿ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿ ಚಲಿಸುತ್ತಿದ್ದ ತುರುವೇಕೆರೆ ಲಿಂಗಣ್ಣ, ಆನಂದ ಸೇರಿ ಒಟ್ಟು 7 ಮಂದಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಮೈಸೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಪಿಎಸ್‌ಐ ಪುನೀತ್‌ ನೇತೃತ್ವದ ಪೊಲೀಸರ ತಂಡ ಆಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ