ಆ್ಯಪ್ನಗರ

ಕರ್ತವ್ಯಲೋಪವೆಸಗಿದವರ ವಿರುದ್ಧ ಕ್ರಮ: ಐಜಿಪಿ

ಐಜಿಪಿ -ಕೆಹೊನ್ನಲಗೆರೆ ಗ್ರಾಮದಲ್ಲಿ ಪೊಲೀಸ್‌ ಉಪಠಾಣೆ ತೆರೆಯಲು ಕ್ರಮ ವಿಕ ಸುದ್ದಿಲೋಕ ಮದ್ದೂರು...

Vijaya Karnataka 29 Dec 2018, 5:00 am
-ಕೆ.ಹೊನ್ನಲಗೆರೆ ಗ್ರಾಮದಲ್ಲಿ ಪೊಲೀಸ್‌ ಉಪಠಾಣೆ ತೆರೆಯಲು ಕ್ರಮ
Vijaya Karnataka Web action against those who did mistake jds leader prakash murder case igp
ಕರ್ತವ್ಯಲೋಪವೆಸಗಿದವರ ವಿರುದ್ಧ ಕ್ರಮ: ಐಜಿಪಿ

ಮದ್ದೂರು: ಜೆಡಿಎಸ್‌ ಮುಖಂಡ ತೊಪ್ಪನಹಳ್ಳಿ ಪ್ರಕಾಶ್‌ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗೊಳಪಡಿಸಿರುವುದಾಗಿ ದಕ್ಷಿಣ ವಲಯ ಐಜಿಪಿ ಕೆ.ಎಲ್‌. ಶರತ್‌ಚಂದ್ರ ತಿಳಿಸಿದರು.

ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ಪ್ರಕಾಶ್‌ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

''ಆರೋಪಿಗಳೆಲ್ಲರನ್ನೂ ಬಂಧಿಸಲು ಸ್ಥಳೀಯ ಪೊಲೀಸರು ಅಗತ್ಯ ಕ್ರಮವಹಿಸಿದ್ದು, ಇಂತಹ ಕೃತ್ಯಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ,'' ಎಂದ ಅವರು, ''ಗ್ರಾಮದಲ್ಲಿ ರಕ್ಷ ಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕೈಗೊಂಡಿರುವುದಾಗಿ,'' ತಿಳಿಸಿದರು.

''ಕರ್ತವ್ಯ ಲೋಪವೆಸಗಿರುವ ಸಂಬಂಧ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ ದೇವರಾಜು ವರದಿ ನೀಡಲಿದ್ದಾರೆ. ಅಧಿಕಾರಿಗಳು ಕರ್ತವ್ಯ ಲೋಪವೆಸಗಿರುವುದು ಸಾಬೀತಾದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕ್ರಮವಹಿಸುವ ಭರವಸೆ,''ನೀಡಿದರು.

''ಈ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿರುವ ಅಂಗನವಾಡಿ ಉಪಕೇಂದ್ರದಲ್ಲಿ ಉಪ ಪೊಲೀಸ್‌ ಠಾಣೆ ತೆರೆಯಲು ಸಚಿವರು ಸೂಚನೆ ನೀಡಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ಒಂದು ವಾರದಲ್ಲಿ ದುರಸ್ತಿಗೊಳಿಸಿ ಉಪ ಪೊಲೀಸ್‌ ಠಾಣೆ ತೆರೆಯಲು ಅಗತ್ಯ ಕ್ರಮವಹಿಸುವುದಾಗಿ,'' ಹೇಳಿದರು. ಈ ವೇಳೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ್‌ದೇವರಾಜು, ಡಿವೈಎಸ್‌ಪಿ ಶೈಲೇಂದ್ರಕುಮಾರ್‌, ಸಿಪಿಐ ಮಹೇಶ್‌ ಸೇರಿದಂತೆ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ