ಆ್ಯಪ್ನಗರ

ಆರೋಗ್ಯ ಕ್ಷೇತ್ರ ಕಡೆಗಣನೆ: ಆರೋಪ

ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಶೇ.1ರಷ್ಟು ಹಣವನ್ನು ಮಾತ್ರ ದೇಶದ ಆರೋಗ್ಯ ವಲಯಕ್ಕೆ ಸರಕಾರಗಳು ನೀಡುತ್ತಿರುವುದು ದುರಂತ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ ಹೇಳಿದರು.

Vijaya Karnataka 7 Jan 2019, 5:00 am
ಮಂಡ್ಯ: ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಶೇ.1ರಷ್ಟು ಹಣವನ್ನು ಮಾತ್ರ ದೇಶದ ಆರೋಗ್ಯ ವಲಯಕ್ಕೆ ಸರಕಾರಗಳು ನೀಡುತ್ತಿರುವುದು ದುರಂತ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಮೂರ್ತಿ ಹೇಳಿದರು.
Vijaya Karnataka Web arogya ksetra kadeganane aropa
ಆರೋಗ್ಯ ಕ್ಷೇತ್ರ ಕಡೆಗಣನೆ: ಆರೋಪ


ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಹಾಚೇತನ ಟ್ರಸ್ಟ್‌ ಮತ್ತು ಪ್ರಬುದ್ಧ ಮಾರ್ಗ ಸಾಮಾಜಿಕ ಮತ್ತು ಶೈಕ್ಷ ಣಿಕ ಟ್ರಸ್ಟ್‌ ಸಹಯೋಗದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಕಾರ್ಯಾಗಾರ ಉದ್ಘಾಟಿಸಿ ಅವರ ಮಾತನಾಡಿದರು.

''ಕನಿಷ್ಠ 4 ರಿಂದ 6ರಷ್ಟು ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ನಿಗದಿಪಡಿಸಿದೆ. ನಮ್ಮನ್ನಾಳುವ ಸರಕಾರಗಳಿಗೆ ದೇಶದ ಜನರ ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ಇಲ್ಲ. ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಜಿಡಿಪಿಯ ಶೇ.4ರಷ್ಟು ಹಣವನ್ನು ಆರೋಗ್ಯ ವಲಯಕ್ಕೆ ಮೀಸಲಿಟ್ಟು ಬಳಕೆ ಮಾಡುವಾಗ ನಮ್ಮ ದೇಶಕ್ಕೆ ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು.

ನಂತರ ಬೆಳಕು ಕಣ್ಣಿನ ಆಸ್ಪತ್ರೆಯ ತಜ್ಞ ಸಂಜಯ್‌ ಅವರು ಕಣ್ಣಿನ ತಪಾಸಣೆ ನಡೆಸಿದರು. ಮಹಾ ಚೇತನ ಟ್ರಸ್ಟ್‌ ಅಧ್ಯಕ್ಷ ಶಿವಶಂಕರ್‌ ಅಧ್ಯಕ್ಷತೆ ವಹಿಸಿದ್ದರು. ಪ್ರಬುದ್ಧ ಮಾರ್ಗ ಟ್ರಸ್ಟ್‌ ಅಧ್ಯಕ್ಷ ಚಲುವರಾಜು, ದುಗ್ಗನಹಳ್ಳಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ತಾಳಶಾಸನ ಮೋಹನ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ