ಶ್ರೀರಂಗಪಟ್ಟಣ (ಮಂಡ್ಯ): ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮೇಲಿನ ದಾಳಿ ಪ್ರಕರಣ ಮುಂದುವರೆದಿದೆ. ಇದೀಗ ಮಂಡ್ಯದಲ್ಲೂ ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಿದೆ. ದಾಳಿಯಿಂದ ನೊಂದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆ ಪಾಲಾಗಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಉರುಳಿ ಕ್ಯಾತನಹಳ್ಳಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಕೊರೊನಾ ಶಂಕಿತ ವ್ಯಕ್ತಿ ದೌರ್ಜನ್ಯ ಎಸಗಿದ್ದಾನೆ. ಇತ್ತೀಚೆಗೆ ಮೈಸೂರಿನ ಮಹದೇಶ್ವರ ನರ್ಸಿಂಗ್ ಹೋಂನಲ್ಲಿ ವ್ಯಕ್ತಿಯೊಬ್ಬನಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ, ಆ ಆಸ್ಪತ್ರೆಗೆ ಹೋಗಿದ್ದ ಎಲ್ಲರನ್ನೂ ಹೋಂ ಕ್ವಾರೆಂಟೈನ್ ಮಾಡಲು ಸೂಚನೆ ನೀಡಲಾಗಿತ್ತು.
ವಾರಿಯರ್ಸ್ ಗೆ ಜೀವ ಬೆದರಿಕೆ
ಮಹದೇಶ್ವರ ಆಸ್ಪತ್ರೆಗೆ ತೆರಳಿದ್ದ ಉರುಳಿ ಕ್ಯಾತನಹಳ್ಳಿಯ ವ್ಯಕ್ತಿ ಕೂಡಾ ಹೋಂ ಕ್ವಾರೆಂಟೈನ್ಗೆ ಒಳಪಡಬೇಕಿತ್ತು. ಹೀಗಾಗಿ, ಆತನಿಗೆ ಜಾಗೃತಿ ಮೂಡಿಸಲು ಆಶಾ ಕಾರ್ಯಕರ್ತೆಗ್ರಾಮಕ್ಕೆ ತೆರಳಿದ್ದರು. ಆದ್ರೆ, ಆರೋಪಿ ಹೋಂ ಕ್ವಾರಂಟೈನ್ಗೆ ಒಳಪಟ್ಟಿರಲಿಲ್ಲ. ಹೀಗಾಗಿ, ಆಶಾ ಕಾರ್ಯಕರ್ತೆ ಮೀನಾಕ್ಷಿ ಜಾಗೃತಿ ಮೂಡಿಸಲು ಮುಂದಾದ್ರು. ಈ ವೇಳೆ, ಕೊರೊನಾ ಶಂಕಿತ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ.
ದೌರ್ಜನ್ಯಕ್ಕೀಡಾದ ಆಶಾ ಕಾರ್ಯಕರ್ತೆ ಮನೆಗೆ ಹೋಗಿ ಧೈರ್ಯ ತುಂಬಿದ ಸಚಿವರು
ದೌರ್ಜನ್ಯಕ್ಕೊಳಗಾದ ಆಶಾ ಕಾರ್ಯಕರ್ತೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಶ್ರೀರಂಗಪಟ್ಟಣ ತಹಸೀಲ್ದಾರ್ ರೂಪ ಕೂಡಾ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಶಾಸಕ ರವೀಂದ್ರ ಶ್ರೀಕಂಠಯ್ಯ, ಎಸಿ ಶೈಲಜಾ ಹಾಗೂ ತಹಸೀಲ್ದಾರ್ ರೂಪಾ ಆಸ್ಪತ್ರೆಗೆ ತೆರಳಿ ಆಶಾ ಕಾರ್ಯಕರ್ತೆ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ್ದಾರೆ.
ಮೈಸೂರಲ್ಲಿ ಪುಂಡರ ಅಟ್ಟಹಾಸ! ಮಾಸ್ಕ್ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಆವಾಜ್
ವಾರಿಯರ್ಸ್ ಗೆ ಜೀವ ಬೆದರಿಕೆ
ಮಹದೇಶ್ವರ ಆಸ್ಪತ್ರೆಗೆ ತೆರಳಿದ್ದ ಉರುಳಿ ಕ್ಯಾತನಹಳ್ಳಿಯ ವ್ಯಕ್ತಿ ಕೂಡಾ ಹೋಂ ಕ್ವಾರೆಂಟೈನ್ಗೆ ಒಳಪಡಬೇಕಿತ್ತು. ಹೀಗಾಗಿ, ಆತನಿಗೆ ಜಾಗೃತಿ ಮೂಡಿಸಲು ಆಶಾ ಕಾರ್ಯಕರ್ತೆಗ್ರಾಮಕ್ಕೆ ತೆರಳಿದ್ದರು. ಆದ್ರೆ, ಆರೋಪಿ ಹೋಂ ಕ್ವಾರಂಟೈನ್ಗೆ ಒಳಪಟ್ಟಿರಲಿಲ್ಲ. ಹೀಗಾಗಿ, ಆಶಾ ಕಾರ್ಯಕರ್ತೆ ಮೀನಾಕ್ಷಿ ಜಾಗೃತಿ ಮೂಡಿಸಲು ಮುಂದಾದ್ರು. ಈ ವೇಳೆ, ಕೊರೊನಾ ಶಂಕಿತ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ.
ದೌರ್ಜನ್ಯಕ್ಕೀಡಾದ ಆಶಾ ಕಾರ್ಯಕರ್ತೆ ಮನೆಗೆ ಹೋಗಿ ಧೈರ್ಯ ತುಂಬಿದ ಸಚಿವರು
ದೌರ್ಜನ್ಯಕ್ಕೊಳಗಾದ ಆಶಾ ಕಾರ್ಯಕರ್ತೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಶ್ರೀರಂಗಪಟ್ಟಣ ತಹಸೀಲ್ದಾರ್ ರೂಪ ಕೂಡಾ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಶಾಸಕ ರವೀಂದ್ರ ಶ್ರೀಕಂಠಯ್ಯ, ಎಸಿ ಶೈಲಜಾ ಹಾಗೂ ತಹಸೀಲ್ದಾರ್ ರೂಪಾ ಆಸ್ಪತ್ರೆಗೆ ತೆರಳಿ ಆಶಾ ಕಾರ್ಯಕರ್ತೆ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ್ದಾರೆ.
ಮೈಸೂರಲ್ಲಿ ಪುಂಡರ ಅಟ್ಟಹಾಸ! ಮಾಸ್ಕ್ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಆವಾಜ್