ಆ್ಯಪ್ನಗರ

ಹಲ್ಲೆ ಆರೋಪ: ದೂರು ನೀಡಿದ ಪಿಡಿಒ

ವಿಕ ಸುದ್ದಿಲೋಕ ಮಂಡ್ಯ ಮಳವಳ್ಳಿ ತಾಲೂಕಿನ ಯೋಜನಾಧಿಕಾರಿ ಪವನ್‌ಕುಮಾರ್‌ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬೆಳಕವಾಡಿ ಸಮೀಪದ ಕಗ್ಗಲಿಪುರ ಗ್ರಾಮ ಪಂಚಾಯಿತಿ ...

Vijaya Karnataka 27 Feb 2019, 5:00 am
ಮಂಡ್ಯ: ಮಳವಳ್ಳಿ ತಾಲೂಕಿನ ಯೋಜನಾಧಿಕಾರಿ ಪವನ್‌ಕುಮಾರ್‌ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬೆಳಕವಾಡಿ ಸಮೀಪದ ಕಗ್ಗಲಿಪುರ ಗ್ರಾಮ ಪಂಚಾಯಿತಿ ಪಿಡಿಒ ಎನ್‌.ಎಂ.ಯಶಸ್ವಿನಿ ಬೆಳಕವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
Vijaya Karnataka Web assault by taluk level officer accused pdo complaint
ಹಲ್ಲೆ ಆರೋಪ: ದೂರು ನೀಡಿದ ಪಿಡಿಒ


''ಪವನ್‌ಕುಮಾರ್‌ ನಿತ್ಯ ಅನಗತ್ಯವಾಗಿ ನನಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದಲ್ಲದೆ, ಮಾನಸಿಕ ಹಿಂಸೆ ನೀಡುತ್ತಿದ್ದರು. ಇದರಿಂದ ಬೇಸತ್ತು ಅವರ ಕರೆ ಸ್ವೀಕರಿಸುತ್ತಿರಲಿಲ್ಲ. ಕುಪಿತಗೊಂಡ ಪವನ್‌ಕುಮಾರ್‌ ಫೆ. 25ರಂದು ಕಗ್ಗಲಿಪುರ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ನನ್ನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ನನ್ನ ಮೊಬೈಲ್‌ ಕಸಿದುಕೊಂಡು ಮುಂದಿನ ದಿನಗಳಲ್ಲಿ ನೀನು ಕರ್ತವ್ಯ ನಿರ್ವಹಿಸದಂತೆ ಮಾಡುತ್ತೇನೆ. ಕೊಲೆ ಮಾಡದೇ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ