ಆ್ಯಪ್ನಗರ

ಪೊಲೀಸರ ಮೇಲೆ ಹಲ್ಲೆ: ಮೂವರ ಬಂಧನ

ಮೂವರ ಬಂಧನ ವಿಕ ಸುದ್ದಿಲೋಕ ಶ್ರೀರಂಗಪಟ್ಟಣ (ಮಂಡ್ಯ) ನೂತನ ವರ್ಷ ಸಂಭ್ರಮಾಚರಣೆ ವೇಳೆ ನಡೆಯುತ್ತಿದ್ದ ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ...

Vijaya Karnataka 2 Jan 2019, 5:00 am
ಶ್ರೀರಂಗಪಟ್ಟಣ (ಮಂಡ್ಯ): ನೂತನ ವರ್ಷ ಸಂಭ್ರಮಾಚರಣೆ ವೇಳೆ ನಡೆಯುತ್ತಿದ್ದ ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಮೂವರು ಆರೋಪಿಗಳನ್ನು ಕೆಆರ್‌ಎಸ್‌ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web attack on police 3 people arrest in sriranagapattana
ಪೊಲೀಸರ ಮೇಲೆ ಹಲ್ಲೆ: ಮೂವರ ಬಂಧನ


ಮೈಸೂರಿನ ಒಂಟಿಕೊಪ್ಪಲು ನಿವಾಸಿ ವಿ.ಮಹದೇವು, ಆತನ ಮಗ ಪ್ರೀತಂಗೌಡ ಹಾಗೂ ರಾಮಕೃಷ್ಣನಗರ ನಿವಾಸಿ ಮನೋಜ್‌ ಬಂಧಿತರು. ಆರೋಪಿಗಳ ವಿರುದ್ಧ ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ, ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಆರೋಪಿಗಳನ್ನು ನಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳು ತಾಲೂಕಿನ ಮೊಗರಹಳ್ಳಿ ಬಳಿ ಇರುವ ಹೋಟೆಲ್‌ನಲ್ಲಿ ಮಧ್ಯರಾತ್ರಿ 12.45 ರ ಸಮಯದಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಪೊಲೀಸ್‌ ಪೇದೆ ಲಕ್ಷ್ಮಿಪುತ್ರ ಗಲಾಟೆ ತಡೆಯಲು ಹೋದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮುಖ್ಯಪೇದೆ ಮಂಜೇಗೌಡ ಮೇಲೂ ಚಾಕು ಹಾಗೂ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಇವರು ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಎಸ್‌ಐ ನವೀನ್‌ಗೌಡ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ