ಆ್ಯಪ್ನಗರ

‘ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸಿ’

ವಿಕ ಸುದ್ದಿಲೋಕ ಮಂಡ್ಯ ಯುವಜನತೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು...

Vijaya Karnataka 21 Jun 2018, 5:00 am
ಮಂಡ್ಯ: ಯುವಜನತೆ ದುಶ್ಚಟಗಳಿಂದ ದೂರವಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಸಮಾಜವನ್ನು ಕಾಡುವ ಪಿಡುಗುಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದು ಯುವ ಪರಿವರ್ತಕರಾದ ಸುಜಾತ ಉಮೇಶ್‌ ಕಿವಿಮಾತು ಹೇಳಿದರು.
Vijaya Karnataka Web awareness against drugs workshop in mandya
‘ಮಾದಕ ವಸ್ತುಗಳ ವಿರುದ್ಧ ಅರಿವು ಮೂಡಿಸಿ’


ನಗರದ ಪೊಲೀಸ್‌ ಕಾಲನಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಇಲಾಖೆ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಾಲೇಜು ಹಂತದಲ್ಲಿ ಮಾದಕ ವಸ್ತುಗಳು ಯುವಜನರನ್ನು ಆಕರ್ಷಿಸುತ್ತವೆ. ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗುವ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಯುವಸ್ಪಂದನ ವತಿಯಿಂದ ರಾಜ್ಯಾದ್ಯಂತ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಎಲ್ಲಾ ಪ್ರೌಢಶಾಲೆ, ಕಾಲೇಜುಗಳಲ್ಲಿ ಕಾರ್ಯಾಗಾರ ಹಮ್ಮಿಕೊಂಡು ಮಾದಕ ವಸ್ತುಗಳ ಬಳಕೆಯಿಂದಾಗುವ ಹಾನಿ ಕುರಿತು ಅರಿವು ಮೂಡಿಸಲಾಗುತ್ತಿದೆ. ಹದಿಹರೆಯದ ವಯಸ್ಸಿನಲ್ಲಿ ಕೆಟ್ಟ ಹವ್ಯಾಸಗಳಿಂದ ಜೀವನ ಪೂರ್ತಿ ಪಶ್ಚಾತ್ತಾಪ ಪಡಬೇಕಾಗುತ್ತದೆ. ಉತ್ತಮ ಆರೋಗ್ಯ ಇಲ್ಲದಿದ್ದರೆ ಮಾನಸಿಕವಾಗಿಯೂ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಒಳ್ಳೆಯ ಹವ್ಯಾಸಗಳಿಂದ ಜೀವನದಲ್ಲಿ ಗುರಿ ತಲುಪಲು ಸಾಧ್ಯವಾಗುತ್ತದೆ. ಮೊಬೈಲ್‌, ಇಂಟರ್‌ನೆಟ್‌ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಬಳಕೆಯಾಗಬೇಕು. ಜೀವನದ ಹಾದಿ ತಪ್ಪುವಂತಹ ಕೆಟ್ಟದಾರಿಗೆ ಅವಕಾಶವಾಗಬಾರದು ಎಂದು ಕಿವಿಮಾತು ಹೇಳಿದರು.

ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ