ಆ್ಯಪ್ನಗರ

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ವಿಳಂಬ: ಸಿಎಂ ಭೇಟಿಯಾದ ಸಂಸದ

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಭೇಟಿಯಾಗಿ ಬೆಂಗಳೂರು-ಮೈಸೂರು ಹತ್ತು ಪಥದ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಸಮಾಲೋಚಿಸಿದರು.

Vijaya Karnataka 27 Sep 2018, 5:00 am
ಮಂಡ್ಯ: ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಭೇಟಿಯಾಗಿ ಬೆಂಗಳೂರು-ಮೈಸೂರು ಹತ್ತು ಪಥದ ಹೆದ್ದಾರಿ ಕಾಮಗಾರಿ ವಿಳಂಬದ ಬಗ್ಗೆ ಸಮಾಲೋಚಿಸಿದರು.
Vijaya Karnataka Web bangalore mysore highway delay mp meeting with cm
ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ವಿಳಂಬ: ಸಿಎಂ ಭೇಟಿಯಾದ ಸಂಸದ


ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಷಟ್ಪಥ ನಿರ್ಮಾಣ ಕಾಮಗಾರಿ ವಿಳಂಬದ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಿದ್ದೇನೆ. ಹೆದ್ದಾರಿಯ ಎರಡೂ ಬದಿ ಬೆಳೆದಿರುವ ಮರಗಳ ಕಟಾವು ವಿಚಾರವಾಗಿ ಕಾಮಗಾರಿ ವಿಳಂಬವಾಗುತ್ತಿದೆ. ಇದು ಅರಣ್ಯ ಇಲಾಖೆ ಮತ್ತು ಸರಕಾರದ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

''ಫೆಬ್ರವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನು 10 ಪಥಗಳ ಎಕ್ಸ್‌ಪ್ರೆಸ್‌ ಹೈವೆಯಾಗಿ ಮಾಡುವುದಾಗಿ ಘೋಷಣೆ ಮಾಡಿದ್ದರು. ಮರುದಿನವೇ ಅದಕ್ಕೆ ಕ್ಯಾಬಿನೆಟ್‌ ಮಂಜೂರು ಸಿಕ್ಕಿತ್ತು. ಮಾ. 22ರಂದು ಗುದ್ದಲಿ ಪೂಜೆಯೂ ನಡೆದಿದೆ. ಆದರೆ, ಫಾರೆಸ್ಟ್‌ ಕ್ಲಿಯರೆನ್ಸ್‌ನಿಂದ ಸ್ವಲ್ಪ ತೊಂದರೆಯಾಗಿದೆ. ಇದರಿಂದ ಯೋಜನೆಯನ್ನು ವಿಧ್ಯುಕ್ತವಾಗಿ ಆರಂಭಿಸಲು ವಿಳಂಬವಾಗುತ್ತಿದೆ'' ಎಂದು ಬೇಸರ ವ್ಯಕ್ತಪಡಿಸಿದರು.

''ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಮರಗಳ ಮೌಲ್ಯವನ್ನು ನಾವು ಪಾವತಿಸುತ್ತೇವೆ. ಮರಗಳ ಕಟಾವಿಗೆ ಅನುಮತಿ ಬೇಕೆಂದು ತಿಳಿಸಿದ್ದೆವು. ಆದರೀಗ ನಾವೇ ಟೆಂಡರ್‌ ಕರೆದು ಮರಗಳನ್ನು ಕಟಾವು ಮಾಡುತ್ತೇವೆಂದು ಅರಣ್ಯ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇದರಿಂದ 7000 ಕೋಟಿ ರೂ.ಗಳ ಕೇಂದ್ರ ಸರಕಾರದ ಈ ಯೋಜನೆ ವಿಳಂಬವಾಗುತಿÜ್ತದೆ'' ಎಂದು ತಿಳಿಸಿದರು.

''ಹೀಗಾಗಿ ಯೋಜನೆ ಆರಂಭಕ್ಕೆ ಬೇಕಾಗುವ ಅನುಮತಿಯನ್ನು ಅರಣ್ಯ ಇಲಾಖೆಯಿಂದ ಕೊಡಿಸಿ ಎಂದು ಸಿಎಂ ಅವರಿಗೆ ಮನವಿ ಮಾಡಿದ್ದೇನೆ. ಜತೆಯಲ್ಲಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಮನವಿಗೆ ಸ್ಪಂದಿಸಿದ್ದು, ಅಡಚಣೆಗಳನ್ನು ಪರಿಹರಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಹೆದ್ದಾರಿ ಕಾಮಗಾರಿ ಆರಂಭವಾಗಬೇಕೆಂಬುದು ನಮ್ಮ ಉದ್ದೇಶ'' ಎಂದು ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ