ಆ್ಯಪ್ನಗರ

ಪೆಟ್ರೋಲ್‌ ಬಂಕ್‌ನಲ್ಲಿ ಬೈಕ್‌ಗೆ ಬೆಂಕಿ

ಪೆಟ್ರೋಲ್‌ ಹಾಕುತ್ತಿರುವಾಗಲೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷ ಣವೇ ಸಿಬ್ಬಂದಿ ಪೆಟ್ರೋಲ್‌ ಹಾಕುವುದನ್ನು ನಿಲ್ಲಿಸಿದ್ದಾನೆ. ಈ ವೇಳೆ ಬೈಕ್‌ನ ಮಾಲೀಕ ಬೈಕನ್ನು ಮುಂದಕ್ಕೆ ತೆಗೆದುಕೊಂಡು ಹೋಗಿದ್ದು, ಬಂಕ್‌ನ ಸಿಬ್ಬಂದಿ ನೀರು ಹಾಗೂ ಫೈರ್‌ ಸೇಫ್ಟಿ ಸಿಲಿಂಡರ್‌ ಬಳಸಿ ಬೆಂಕಿ ನಂದಿಸಿದ್ದಾರೆ.

Vijaya Karnataka 26 Apr 2019, 8:51 am
ಮಂಡ್ಯ: ನಗರದ ಜೆ.ಸಿ.ವೃತ್ತದಲ್ಲಿನ ಶಿವಲೀಲಾ ಎಂಟರ್‌ ಪ್ರೈಸಸ್‌ ಪೆಟ್ರೋಲ್‌ ಬಂಕ್‌ನಲ್ಲಿ (ಸತ್ಯಪ್ಪನ ಬಂಕ್‌) ಪೆಟ್ರೋಲ್‌ ಹಾಕುವಾಗ ಬೈಕೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
Vijaya Karnataka Web bike


ಪೆಟ್ರೋಲ್‌ ಹಾಕುತ್ತಿರುವಾಗಲೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ತಕ್ಷ ಣವೇ ಸಿಬ್ಬಂದಿ ಪೆಟ್ರೋಲ್‌ ಹಾಕುವುದನ್ನು ನಿಲ್ಲಿಸಿದ್ದಾನೆ. ಈ ವೇಳೆ ಬೈಕ್‌ನ ಮಾಲೀಕ ಬೈಕನ್ನು ಮುಂದಕ್ಕೆ ತೆಗೆದುಕೊಂಡು ಹೋಗಿದ್ದು, ಬಂಕ್‌ನ ಸಿಬ್ಬಂದಿ ನೀರು ಹಾಗೂ ಫೈರ್‌ ಸೇಫ್ಟಿ ಸಿಲಿಂಡರ್‌ ಬಳಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಕೆಲಕಾಲ ಪೆಟ್ರೋಲ್‌ ಬಂಕ್‌ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಸ್ತೆಯಲ್ಲಿ ಹೋಗುತ್ತಿದ್ದ ಜನರು ಭಯಭೀತರಾಗಿದ್ದರು.

ಬೆಳಗ್ಗೆಯಷ್ಟೇ ಪೆಟ್ರೋಲ್‌ ಬಂಕಿಗೆ ಟ್ಯಾಂಕರ್‌ನಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ತುಂಬಿಸಲಾಗಿತ್ತು. ಹೀಗಾಗಿ ರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಪೆಟ್ರೋಲ್‌ ಬಂಕ್‌ ಮಾಲೀಕರು ಹಾಗೂ ಸಿಬ್ಬಂದಿ ಇನ್ನಷ್ಟು ಆತಂಕಗೊಂಡಿದ್ದರು.

ಬೆಂಕಿ ಸಂಪೂರ್ಣವಾಗಿ ತಹಬದಿಗೆ ಬಂದ ನಂತರ ಎಲ್ಲರೂ ನಿಟ್ಟುಸಿರು ಬಿಟ್ಟರು. ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡು ಬೆಂಕಿ ನಂದಿಸಿದ್ದರಿಂದ ಸಂಭವನೀಯ ದೊಡ್ಡ ಅನಾಹುತವೊಂದು ತಪ್ಪಿದೆ. ಬೈಕ್‌ಗೆ ಹೆಚ್ಚೇನೂ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ