ಆ್ಯಪ್ನಗರ

ಬೈಕ್‌ಗಳ ಡಿಕ್ಕಿ: ಸವಾರ ಸಾವು

ಸವಾರ ಸಾವು ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಶ್ರೀರಂಗಪಟ್ಟಣ-ಬನ್ನೂರು ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ...

Vijaya Karnataka 22 May 2019, 5:00 am
ಶ್ರೀರಂಗಪಟ್ಟಣ: ತಾಲೂಕಿನ ಮರಳಗಾಲ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಶ್ರೀರಂಗಪಟ್ಟಣ-ಬನ್ನೂರು ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟರು.
Vijaya Karnataka Web bike collision rider death in srirangapattana taluk
ಬೈಕ್‌ಗಳ ಡಿಕ್ಕಿ: ಸವಾರ ಸಾವು


ಗಂಜಾಂ ಗ್ರಾಮದ ವೈರಮುಡಿ ಅವರ ಮಗ ಚಲುವರಾಜು ಅಲಿಯಾಸ್‌ ಕರಿಯಪ್ಪ (39) ಮೃತರು. ಕಾರ್ಯನಿಮಿತ್ತ ದೊಡ್ಡಪಾಳ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳಿ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ವೇಳೆ ಹೆದ್ದಾರಿ ತಿರುವಿನಲ್ಲಿ ಎದುರುಗಡೆಯಿಂದ ಬಂದ ಬುಲೆಟ್‌ ಬೈಕ್‌ ಮುಖಾಮುಖಿ ಡಿಕ್ಕಿಹೊಡೆದು ಈ ಅವಘಡ ಸಂಭವಿಸಿದೆ. ತೀವ್ರಗಾಯಗೊಂಡ ಚಲುವರಾಜು ಸ್ಥಳದಲ್ಲೇ ಮೃತಪಟ್ಟರು. ಬುಲೆಟ್‌ ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ