ಆ್ಯಪ್ನಗರ

ವಕೀಲರಿಂದ ಬೈಕ್ ರ‌್ಯಾಲಿ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮಖಂಡಿಸಿ ವಕೀಲರ ಸಂಘದ ಪದಾಧಿಕಾರಿಗಳು ಬೈಕ್ ರ‌್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.

Vijaya Karnataka Web 2 Jul 2017, 5:15 am
ಮದ್ದೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮಖಂಡಿಸಿ ವಕೀಲರ ಸಂಘದ ಪದಾಧಿಕಾರಿಗಳು ಬೈಕ್ ರ‌್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.
Vijaya Karnataka Web bike rally by lawyer
ವಕೀಲರಿಂದ ಬೈಕ್ ರ‌್ಯಾಲಿ


ಪಟ್ಟಣದ ಶಿವಪುರ ಧ್ವಜಸತ್ಯಾಗ್ರಹ ಸೌಧದ ಬಳಿ ಜಮಾಯಿಸಿದ ಪ್ರತಿಭಟನಾ ಕಾರರು ಶಿವಪುರದಿಂದ ಪ್ರವಾಸಿ ಮಂದಿರದ ವರೆವಿಗೆ ಬೈಕ್ ರ‌್ಯಾಲಿ ನಡೆಸಿ ನಾಲ್ವಡಿ ಕಷ್ಣರಾಜ ಒಡೆಯರ್ ವತ್ತದ ಮೈಸೂರು, ಬೆಂಗಳೂರು ಹೆದ್ದಾರಿಯಲ್ಲಿ ಮಾನವ ಸರಪಣಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ರೈತರು ಈಗಾಗಲೇ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು ರಾಜ್ಯ ಸರಕಾರ ರಾತ್ರೋರಾತ್ರಿ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿದರ ಲ್ಲದೇ ಕೂಡಲೇ ವಿಸಿ ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆಗಳನ್ನು ತುಂಬಿಸಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕಳೆದ 7 ತಿಂಗಳಿನಿಂದಲೂ ವಿಸಿ ನಾಲೆಗಳಿಗೆ ನೀರು ಹರಿಸದೆ ಅಂತರ್ಜಲ ಕುಸಿದು ಜನ ಜಾನುವಾರುಗಳಿಗೆ ಕುಡಿ ಯುವ ನೀರಿಗೂ ತೊಂದರೆ ಉಂಟಾಗಿ ದ್ದರೂ ಇಂತಹ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರಕಾರದ ನಿಲುವನ್ನು ಖಂಡಿಸಿದರು. ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳು ನಾಡಿಗೆ ಹರಿಯುತ್ತಿರುವ ನೀರನ್ನು ನಿಲ್ಲಿಸಿ ರೈತರ ಸಂಕಷ್ಟಕ್ಕೆ ಧಾವಿಸುವ ಜತೆಗೆ ವಿಸಿ ನಾಲೆಗಳ ಮೂಲಕ ನೀರು ಹರಿಸಿ ಕೆರೆಕಟ್ಟೆಗಳ ಉಳಿವಿಗೆ ಸರಕಾರ ಹಾಗೂ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ರವಿಕುಮಾರ್, ಪುಟ್ಟಸ್ವಾಮಿ, ಪ್ರಭಾಕರ್, ಸ್ವಾಮಿ, ಸುರೇಶ್, ಮಹೇಶ್, ವೀಶಾಲಾಕ್ಷಿ, ಶೋಭಾ, ಕಮಲಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ