ಆ್ಯಪ್ನಗರ

ಬೈಕ್‌ ಕಳ್ಳತನ: ಮೂವರು ಬಾಲಾಪರಾಧಿಗಳ ಬಂಧನ

ಪಾಂಡವಪುರ: ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಕಡೆ ಬೈಕ್‌ ಕಳವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka 9 Jul 2018, 5:00 am
ಪಾಂಡವಪುರ: ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಕಡೆ ಬೈಕ್‌ ಕಳವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web bike robbery three juveniles arrested
ಬೈಕ್‌ ಕಳ್ಳತನ: ಮೂವರು ಬಾಲಾಪರಾಧಿಗಳ ಬಂಧನ


ಬಂಧಿತ ಮೂವರು ಆರೋಪಿಗಳು 17 ವರ್ಷದೊಳಗಿನ ಬಾಲಾಪರಾಧಿಗಳು. ಇವರಿಂದ ಸುಮಾರು 5 ಲಕ್ಷ ರೂ.ಬೆಲೆಬಾಳುವ 10 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ ಪಟ್ಟಣದಲ್ಲಿ ಮೂವರು ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರು ಅವರನ್ನು ಹಿಡಿದು ವಿಚಾರಣೆ ನಡೆಸಿದಾಗ, ಇದು ಕಳ್ಳತನದ ವಾಹನಗಳು ಎಂಬುದಾಗಿ ತಿಳಿದು ಬಂದಿದೆ. ಬಳಿಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಪಟ್ಟಣದ ಟಿಎಪಿಸಿಎಂಎಸ್‌ ಕಲ್ಯಾಣ ಮಂಟಪ, ಬಿಜಿಎಸ್‌ ಶಾಲೆ, ಚಿಕ್ಕಾಡೆ , ಬೇಬಿಬೆಟ್ಟದ ಜಾತ್ರೆ ಹಾಗೂ ಚಂದ್ರೆ ಗ್ರಾಮದಲ್ಲಿ ಬೈಕ್‌ಗಳನ್ನು ಕಳವು ಮಾಡಿರುವುದಾಗಿ ಬಂಧಿತ ಆರೋಪಿಗಳು ತಪೊ್ಪಪ್ಪಿಕೊಂಡಿದ್ದಾರೆ. ಕಳವು ಮಾಡಿದ ಬೈಕ್‌ಗಳನ್ನು ಪಾಂಡವಪುರ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಮಾರಾಟ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಬಳಿಕ ಪೊಲೀಸರು ಕಳ್ಳರು ಮಾರಾಟ ಮಾಡಿದ್ದ ಎಲ್ಲಾ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು, ಬಂಧಿತ ಮೂವರನ್ನು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಾಲ ನ್ಯಾಯಮಂಡಳಿಗೆ ಒಪ್ಪಿಸಿದ್ದಾರೆ.

ಸರ್ಕಲ್‌ ಇನ್ಸ್‌ಪೆಕ್ಟರ್‌ ಎಂ.ಕೆ.ದೀಪಕ್‌, ಸಿಬ್ಬಂದಿಗಳಾದ ಹರೀಶ್‌, ಕೆ.ಶ್ರೀನಿವಾಸಮೂರ್ತಿ, ರಾಜಶೇಖರ್‌, ಪ್ರದೀಪ್‌ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ