ಆ್ಯಪ್ನಗರ

ಬಿಜೆಪಿ ಸೇರ್ಪಡೆ ಸುಳ್ಳು ಸುದ್ದಿ: ಪುಟ್ಟರಾಜು

ಪುಟ್ಟರಾಜು ವಿಕ ಸುದ್ದಿಲೋಕ ಪಾಂಡವಪುರ ನನ್ನ ರಾಜಕೀಯ ಆರಂಭ ಜೆಡಿಎಸ್‌ನಲ್ಲೇ, ಅಂತ್ಯವೂ ಸಹ ಜೆಡಿಎಸ್‌ ಪಕ್ಷದಲ್ಲಿಯೇ...

Vijaya Karnataka 30 Aug 2019, 5:00 am
ಪಾಂಡವಪುರ: ನನ್ನ ರಾಜಕೀಯ ಆರಂಭ ಜೆಡಿಎಸ್‌ನಲ್ಲೇ, ಅಂತ್ಯವೂ ಸಹ ಜೆಡಿಎಸ್‌ ಪಕ್ಷದಲ್ಲಿಯೇ. ಬಿಜೆಪಿಗೆ ಸೇರುತ್ತಾರೆ ಎನ್ನುವುದು ಸುಳ್ಳುಸುದ್ದಿ ಎಂದು ಮಾಜಿ ಸಚಿವ, ಶಾಸಕ ಸಿ.ಎಸ್‌.ಪುಟ್ಟರಾಜು ಸ್ಪಷ್ಟಪಡಿಸಿದರು.
Vijaya Karnataka Web bjp joins fake news puttaraju
ಬಿಜೆಪಿ ಸೇರ್ಪಡೆ ಸುಳ್ಳು ಸುದ್ದಿ: ಪುಟ್ಟರಾಜು


ಪಟ್ಟಣದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಾನು ನಮ್ಮ ನಾಯಕರಾದ ಎಚ್‌.ಡಿ.ದೇವೇಗೌಡ ಅವರ ಆಶೀರ್ವಾದದೊಂದಿಗೆ ಜೆಡಿಎಸ್‌ ಪಕ್ಷದ ಮೂಲಕ ರಾಜಕೀಯಕ್ಕೆ ಬಂದಿದ್ದೇನೆ. ನನ್ನ ರಾಜಕೀಯ ಅಂತ್ಯವೂ ಸಹ ಜೆಡಿಎಸ್‌ ಪಕ್ಷದಲ್ಲಿಯೇ ಹೊರತು ಬೇರೆ ಪಕ್ಷಕ್ಕೆ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಅದರಲ್ಲೂ ನಾನು ಬಿಜೆಪಿಗೆ ಹೋಗುವ ಮಾತೇ ಇಲ್ಲ. ಕೆಲವು ಮಾಧ್ಯಮಗಳು ನಾನು ಬಿಜೆಪಿ ಸೇರುತ್ತೇನೆ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸಿ ಪ್ರಕಟಿಸಿಸುತ್ತಿವೆ. ನಾನು ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ,'' ಎಂದು ಹೇಳಿದರು.

''ಎಚ್‌.ಡಿ.ದೇವೇಗೌಡರು, ಎಚ್‌.ಡಿ.ಕುಮಾರಸ್ವಾಮಿ ಅವರು ನಮ್ಮ ನಾಯಕರು, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮುಂದಿನ ದಿನಗಳಲ್ಲಿಅವರ ಮಾರ್ಗದರ್ಶನದಲ್ಲಿಯೇ ಜೆಡಿಎಸ್‌ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ. ಗಾಳಿ ಸುದ್ದಿಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ,'' ಎಂದು ಕಾರ‍್ಯಕರ್ತರಿಗೆ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ