ಆ್ಯಪ್ನಗರ

ಫೇಸ್‌ಬುಕ್‌ನಲ್ಲಿ ಬಿಜೆಪಿ ನಾಯಕರ ನಿಂದನೆ: ಕ್ರಮಕ್ಕೆ ಆಗ್ರಹಿಸಿ ದೂರು

ಕ್ರಮಕ್ಕೆ ಆಗ್ರಹಿಸಿ ದೂರು ವಿಕ ಸುದ್ದಿಲೋಕ ಮಂಡ್ಯ ಬಿಜೆಪಿ ನಾಯಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ವ್ಯಕ್ತಿ ವಿರುದ್ಧ ಕ್ರಮ ...

Vijaya Karnataka 21 Jul 2019, 5:00 am
ಮಂಡ್ಯ: ಬಿಜೆಪಿ ನಾಯಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ವ್ಯಕ್ತಿ ವಿರುದ್ಧ ಕ್ರಮ ವಹಿಸುವಂತೆ ಆಗ್ರಹಿಸಿ ಬಿಜೆಪಿ ಕಾರ‍್ಯಕರ್ತರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್‌ ಅವರಿಗೆ ಶನಿವಾರ ದೂರು ಸಲ್ಲಿಸಿದರು.
Vijaya Karnataka Web bjp leaders abuse on facebook complaint demanding action
ಫೇಸ್‌ಬುಕ್‌ನಲ್ಲಿ ಬಿಜೆಪಿ ನಾಯಕರ ನಿಂದನೆ: ಕ್ರಮಕ್ಕೆ ಆಗ್ರಹಿಸಿ ದೂರು


ಮದ್ದೂರು ತಾಲೂಕಿನ ಮಾಲಗಾರನಹಳ್ಳಿ ಶಿವಣ್ಣಗೌಡ ಎಂಬುವವರು ಬಿಜೆಪಿ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ. ಅಮಿತ್‌ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಷ್ಟ್ರನಾಯಕರನ್ನು ತನ್ನ ಫೇಸ್‌ಬುಕ್‌ ಮುಖಪುಟದಲ್ಲಿ ಕೆಟ್ಟದಾಗಿ ಬಿಂಬಿಸಿರುವ ಜೆಡಿಎಸ್‌ ಮುಖಂಡ ಶಿವಣ್ಣಗೌಡರ ವರ್ತನೆ ಸರಿಯಲ್ಲ ಎಂದು ಖಂಡಿಸಿದರು.

ಶಿವಣ್ಣಗೌಡರ ವಿರುದ್ಧ ಕ್ರಮ ತೆಗೆದುಕೊಳ್ಳದೇ ಇದ್ದರೆ ಜಿಲ್ಲಾದ್ಯಂತ ಪ್ರತಿಭಟನೆ ನಡಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಮುಖಂಡರಾದ ಎಚ್‌.ಆರ್‌.ಅರವಿಂದ್‌, ನೆರಳು ಕೃಷ್ಣ, ರೇಣುಕಾಸ್ವಾಮಿ ಆರಾಧ್ಯ, ನಾಗಣ್ಣ, ಶ್ರೀಧರ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ