ಆ್ಯಪ್ನಗರ

ಬಿಜೆಪಿ ಕಾರ‌್ಯಕರ್ತರ ಧರಣಿ

ಕೆಆರ್‌ಎಸ್ ಜಲಾಶಯದಿಂದ ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ‌್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 2 Jul 2017, 5:15 am
ಪಾಂಡವಪುರ: ಕೆಆರ್‌ಎಸ್ ಜಲಾಶಯದಿಂದ ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ‌್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
Vijaya Karnataka Web bjp workers protest
ಬಿಜೆಪಿ ಕಾರ‌್ಯಕರ್ತರ ಧರಣಿ


ಪಟ್ಟಣದ ಡಾ.ರಾಜ್‌ಕುಮಾರ್ ವತ್ತದಲ್ಲಿ ಜಮಾಹಿಸಿದ ಕಾರ‌್ಯಕರ್ತರು ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ರಾಜ್ಯ ಸರಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು.
ರಾಜ್ಯದಲ್ಲೇ ಜನರು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ಜಲಾಶಯಕ್ಕೆ ಬರುತ್ತಿರುವ ಸ್ವಲ್ಪ ಪ್ರಮಾಣದ ನೀರನ್ನು ರಾಜ್ಯ ಸರಕಾರ ಹಾಗೂ ನೀರಾವರಿ ಅಧಿಕಾರಿಗಳು ತಮಿಳು ನಾಡಿಗೆ ಹರಿಸುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿಗೆ ನೀರು ಹರಿಸುವ ಮೂಲಕ ತಮಿಳುನಾಡಿನ ನೀರುಗಂಟಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದ ಜನರ ಹಿತಕಾಯಬೇಕಿರುವ ಮುಖ್ಯಮಂತ್ರಿಗಳು ತಮಿಳುನಾಡಿನ ಜನರ ರಕ್ಷಣೆ ಮುಂದಾಗು ತ್ತಿದ್ದಾರೆ. ಕೆಆರ್‌ಎಸ್ ಜಲಾಶಯ ವ್ಯಾಪ್ತಿಯ ನಾಲೆ ಗಳಿಗೆ ನೀರು ಹರಿಸದ ಕಾರಣ ಅಂತರ್ಜಲ ಕುಸಿತಗೊಂಡು ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ ಎಂದರು.

ಇದೀಗ ಮಡಿಕೇರಿಯಲ್ಲಿ ಸ್ವಲ್ಪ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಸ್ವಲ್ಪ ಪ್ರಮಾಣದ ನೀರು ಬರುತ್ತಿದೆ. ಆದ್ದರಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಸ್ಥಗಿತಗೊಳಿಸಿ ಕೆಆರ್‌ಎಸ್ ಜಲಾಶಯದ ವ್ಯಾಪ್ತಿಯ ನಾಲೆಗಳಿಗೆ ಈ ಕೂಡಲೇ ನೀರು ಹರಿಸ ಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಿಜೆಪಿ ಮುಖಂಡರಾದ ಧನಂಜಯ್, ನವೀನ್‌ಕುಮಾರ್, ಶ್ರೀನಿವಾಸನಾಯ್ಕ, ಅಶೋಕ, ನಂದೀಶ, ಮಹೇಶ, ಮಂಜು, ವೀರಭದ್ರಸ್ವಾಮಿ, ಧನಂಜಯ್, ಗಿರೀಗೌಡ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ