ಆ್ಯಪ್ನಗರ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು

ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ವೇಳೆ ಪಾದಚಾರಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

Vijaya Karnataka 19 Feb 2019, 5:00 am
ನಾಗಮಂಗಲ: ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ವೇಳೆ ಪಾದಚಾರಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
Vijaya Karnataka Web car collides with road devider two dead
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು


ತಾಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಳ್ಳೂರು ಕ್ರಾಸ್‌ ಬಳಿ ಸೋಮುವಾರ ಬೆಳಗ್ಗೆ ಈ ಅವಘಡ ನಡೆದಿದೆ.

ಮಂಗಳೂರಿನ ಮಹಮದ್‌ ಇಮ್ತಿಯಾಜ್‌ (21) ಹಾಗೂ ಮಹಮದ್‌ ತನುವಾಜ್‌ (20) ಮೃತರು. ಸರ್ಫಾನ್‌, ಮುಜಾಮೀಲ್‌, ಸನೋಜ್‌ ಹಾಗೂ ಪಾದಚಾರಿ ಬೆಳ್ಳೂರು ಕ್ರಾಸ್‌ನವರೇ ಆದ ಶಿಕ್ಷ ಕಿ ಸುಶೀಲಮ್ಮ ಗಾಯಗೊಂಡವರು. ಸುಶೀಲಮ್ಮ ವಾಯುವಿಹಾರಕ್ಕೆ ತೆರಳಿದ ವೇಳೆ ಕಾರು ಉರುಳಿ ಬಿದ್ದ ಸಮಯದಲ್ಲಿ ಇವರಿಗೂ ತಾಗಿದ ಪರಿಣಾಮ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಬೆಳ್ಳೂರು ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಗಾಯಾಳುಗಳಿಗೆ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆ ಶವಾಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಸುರೇಶ್‌ಗೌಡ, ಮಾಜಿ ಶಾಸಕ ಚಲುವರಾಯಸ್ವಾಮಿ, ಡಿವೈಎಸ್‌ಪಿ ವಿಶ್ವನಾಥ್‌, ವೃತ್ತ ನಿರೀಕ್ಷ ಕ ನಂಜಪ್ಪ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಬೆಳ್ಳೂರು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ