ಆ್ಯಪ್ನಗರ

ಪಿಎಸ್‌ಐ, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಪೊಲೀಸರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ರೌಡಿಶೀಟರ್‌ ವಿಕ ಸುದ್ದಿಲೋಕ ಕಿಕ್ಕೇರಿ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಸೇರಿದಂತೆ ನಾಲ್ವರು ಪೊಲೀಸ್‌ ಸಿಬ್ಬಂದಿ ...

Vijaya Karnataka 12 Jul 2019, 5:00 am
ಪೊಲೀಸರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ರೌಡಿಶೀಟರ್‌
Vijaya Karnataka Web case file against kikkeri police station psi and staff
ಪಿಎಸ್‌ಐ, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಕಿಕ್ಕೇರಿ: ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಸೇರಿದಂತೆ ನಾಲ್ವರು ಪೊಲೀಸ್‌ ಸಿಬ್ಬಂದಿ ವಿರುದ್ಧವೇ ನ್ಯಾಯಾಲಯದ ನಿರ್ದೇಶನದ ಮೇರೆಗೆ ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಎಸ್‌ಐ ಸಿದ್ದರಾಜು, ಮುಖ್ಯಪೇದೆ ನಿಂಗರಾಜು, ಪೇದೆಗಳಾದ ದೇವರಾಜೇಗೌಡ ಹಾಗೂ ರೇವಣ್ಣ ವಿರುದ್ಧ ಚುಜ್ಜಲಕ್ಯಾತನಹಳ್ಳಿ ನಿವಾಸಿ, ರೌಡಿಶೀಟರ್‌ ಪೃಥಿ ಕೆ.ಆರ್‌.ಪೇಟೆ ಜೆಎಂಎಫ್‌ಸಿ ನ್ಯಾಯಾಲಯದ ಮೊರೆ ಹೋಗಿದ್ದು, ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ: ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ ಪೃಥ್ವಿ ವಿರುದ್ಧ ಚುಜ್ಜಲಕ್ಯಾತನಹಳ್ಳಿ ಗ್ರಾಮದ ಜಾತ್ರೆ ವಿಷಯಕ್ಕೆ ಸಂಬಂಧಿಸಿದಂತೆ ಶಿವರಾಮು ಉಮೇಶ್‌, ಬಸವರಾಜು, ಸೀತಾರಾಂ, ಶ್ರೀನಿವಾಸ್‌, ಯೋಗೇಶ್‌, ದಿನೇಶ್‌ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಈತನನ್ನು ಕಿಕ್ಕೇರಿ ಠಾಣೆಗೆ ಕರೆಸಿಕೊಂಡ ಆಗಿನ ಪಿಎಸ್‌ಐ ಸಿದ್ಧರಾಜು ಹಾಗೂ ಮೂವರು ಸಿಬ್ಬಂದಿ ಆತನಿಗೆ ಥಳಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಇದರ ವಿರುದ್ಧ ಪೃಥ್ವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದ. ಅವರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರಥ್ವಿ ಕೆ.ಆರ್‌.ಪೇಟೆ ಜೆಎಂಎಫ್‌ಸಿ ನ್ಯಾಯಾಲಯದ ಮೆಟ್ಟಿಲೇರಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪಿಎಸ್‌ಐ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಅದರಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ