ಆ್ಯಪ್ನಗರ

HDK ಹೆಸರು ಉಳಿಸಿಕೊಳ್ಳಲು ರೇವಣ್ಣ ಹೆಸರಿಗೆ ಡ್ಯಾಮೇಜ್: ಚೆಲುವರಾಯಸ್ವಾಮಿ ಆರೋಪ

ಸದ್ಯದ ರಾಜಕೀಯ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾರಣ ಹೊರತು, ರೇವಣ್ಣ ಅಲ್ಲ ಎಂದು ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ ಹೇಳಿದರು.

Vijaya Karnataka Web 15 Jul 2019, 11:26 am
ಮಂಡ್ಯ: ಪ್ರಸಕ್ತ ರಾಜ್ಯ ರಾಜಕೀಯ ಸ್ಥಿತಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯೇ ನೇರ ಕಾರಣ ಎಂದು ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web cheluvarayswamy


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಸ್ಥಿತಿಗೆ ಅಣ್ಣ-ತಮ್ಮಂದಿರೇ (ಎಚ್ ಡಿ ಕುಮಾರಸ್ವಾಮಿ ಮತ್ತು ಎಚ್ ಡಿ ರೇವಣ್ಣ) ಹೊಣೆ. ಆದರೆ, ಸಚಿವ ರೇವಣ್ಣ ಅವರಿಂದ ಈ ರೀತಿಯಾಗುತ್ತಿದೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಇಲ್ಲದೇ ರೇವಣ್ಣ ಒಬ್ಬರೇ ಹೊಣೆಯಾಗಲು ಸಾಧ್ಯವಿಲ್ಲ. ಏನೇ ಆದರೂ ಅಂತಿಮವಾಗಿ ಸಹಿ ಹಾಕುವವರು ನಿರ್ಧಾರ ಕೈಗೊಳ್ಳುವವರು ಸಿಎಂ ತಾನೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಎಲ್ಲದಕ್ಕೂ ರೇವಣ್ಣ ಒಬ್ಬರೇ ಕಾರಣ ಎನ್ನುವುದಾದರೆ, ಅವರನ್ನು ಸಚಿವ ಸಂಪುಟದಿಂದ ಹೊರಗಿಟ್ಟು ಸರಕಾರ ನಡೆಸಬಹುದಿತ್ತು. ಕುಮಾರಸ್ವಾಮಿ ತಮ್ಮ ಹೆಸರು ಉಳಿಸಿಕೊಳ್ಳಲು ರೇವಣ್ಣ ಹೆಸರು ಡ್ಯಾಮೇಜ್ ಮಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ದೂರಿದ್ದಾರೆ.

ಸದ್ಯದ ಸ್ಥಿತಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೇ ನೇರ ಹೊಣೆ ಹೊರತು, ಸಚಿವ ರೇವಣ್ಣ ಅಲ್ಲ. ರಾಜಕೀಯ ಅನುಭವ ಇಲ್ಲದವರು ಮಾತ್ರ ರೇವಣ್ಣ ಅವರನ್ನು ದೂರುತ್ತಿದ್ದಾರೆ ಅಷ್ಟೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಕುಟುಂಬದ ಕಿರುಕುಳವೇ ತಮ್ಮ ರಾಜೀನಾಮೆಗೆ ಕಾರಣ ಎಂದು ಪರೋಕ್ಷವಾಗಿ ಒಪ್ಪಿಕೊಂಡಿರುವ ಮಾಜಿ ಸಚಿವ ಚೆಲುವರಾಯಸ್ವಾಮಿ, ಹೆಗಡೆಯವರ ಕಾಲದಿಂದ ಇಲ್ಲಿಯವರೆಗೂ ಅದೇ ಮುಂದುವರೆದಿದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ