ಆ್ಯಪ್ನಗರ

ಡಿಕೆಶಿಗೆ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ ಅಂದಿದ್ರಂತೆ ಎಚ್.ಡಿ.ಕೆ- ಚೆಲುವರಾಯಸ್ವಾಮಿ ಬಾಂಬ್

ಅಕ್ರಮ ಹಣಕಾಸು ವರ್ಗಾವಣೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಕುರಿತಾಗಿ ಎಚ್.ಡಿ ಕುಮಾರಸ್ವಾಮಿ ನೀಡಿದ್ದಾರೆನ್ನಲಾದ ಹೇಳಿಕೆಯನ್ನು ಚೆಲುವರಾಯಸ್ವಾಮಿ ಬಹಿರಂಗಪಡಿಸಿದ್ದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

Vijaya Karnataka Web 16 Sep 2019, 6:37 pm
ಮಂಡ್ಯ: ಡಿಕೆ ಶಿವಕುಮಾರ್ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ? ಇದಕ್ಕೆಲ್ಲ ನಾನು ಹೊಣೆಯಾ? ಹೀಗಂತಾ ಮೈಸೂರಿನ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರಂತೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
Vijaya Karnataka Web cheluvarayaswamy


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ಬಗ್ಗೆ ನನಗೆ ಸತ್ಯ ಗೊತ್ತಿಲ್ಲ. ಸತ್ಯಗೊತ್ತಿಲ್ಲದೇ ನಾನು ಮಾತನಾಡೋದು ತಪ್ಪು. ಹೆಚ್ಡಿಕೆ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ ಎಂದು ಯಾರೋ ಹೇಳುತ್ತಿದ್ದರು ಎಂದು ತಮ್ಮ ಮಾತಿನಿಂದ ಜಾರಿಗೊಂಡರು.

ಕುಮಾರಸ್ವಾಮಿಯವರ ಸಿಎಂ ಪಟ್ಟ ಉಳಿಸಲು ಡಿಕೆಶಿ ಎಲ್ಲರನ್ನೂ ಎದುರು ಹಾಕಿಕೊಂಡರು. ಇವತ್ತು ಡಿಕೆಶಿ ಜೊತೆಯಲ್ಲಿ ಕುಮಾರಸ್ವಾಮಿ ನಿಲ್ಲಲಿಲ್ಲ. ಕುಮಾರಸ್ವಾಮಿ ಅವರಿಗೆ ಇಂತಹ ಕಷ್ಟ ಬಂದಿದ್ದರೆ ಡಿಕೆಶಿ ಪೊಲೀಸ್ ಠಾಣೆ ಹತ್ತಿರಾನೇ ಕೂರುತ್ತಿದ್ದರು. ಆದರೆ, ಹೆಚ್ಡಿಕೆ ಮಾಡಿದ್ದು ಏನು? ಒಕ್ಕಲಿಗ ಸಂಘಟನೆಗಳಿಂದ ನಡೆದ ಹೋರಾಟಕ್ಕೂ ಬೆಂಬಲ ಮಾಡಲಿಲ್ಲ ಎಂದು ಹರಿಹಾಯ್ದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಾಡಬಾರದ ತಪ್ಪು ಮಾಡಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲು ಡಿಕೆಶಿ ಬಿಡಲಿಲ್ಲ. ಕಾಂಗ್ರೆಸ್ ರಕ್ಷಣೆ ಮಾಡಿಕೊಳ್ಳಲು ನಿಂತಿದ್ರು. ಈ ಸಿಟ್ಟು ಬಿಜೆಪಿ ನಾಯಕರಿಗೆ ಇತ್ತು. ಈ ಹಿಂದೆ ದೇವೇಗೌಡರ ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು ಎಂದು ಪರೋಕ್ಷವಾಗಿ ಡಿಕೆಶಿ ಬಂಧನಕ್ಕೆ ದೇವೇಗೌಡರ ಕುಟುಂಬ ಕಾರಣ ಎಂದರು.

ದೇವೇಗೌಡರು ಹೇಳುವುದೆಲ್ಲಾ ಸುಳ್ಳು. ಅವರಿಂದ ಅನೇಕರಿಗೆ ನೋವಾಗಿದೆ. ಜನರಿಗೆ ಮನವರಿಕೆ ಆಗುವ ವರೆಗೂ ಇದು ನಡೆಯುತ್ತಲೇ ಇರುತ್ತದೆ. ಜನರಿಗೆ ಅರ್ಥವಾದಾಗ ಎಲ್ಲವೂ ಸರಿಹೋಗುತ್ತದೆ. ಆ ದಿನ ಬೇಗ ಬರುತ್ತದೆ ಎಂದ ಅವರು, ಜಿ.ಟಿ. ದೇವೇಗೌಡರು ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಶ್ರೀನಿವಾಸ್ ಕೂಡ ಸಿಡಿದೆದ್ದು ಹಲವು ವಿಚಾರ ಪ್ರಸ್ತಾಪ ಮಾಡಿದ್ದಾರೆ. ಜೆಡಿಎಸ್ ವರಿಷ್ಠರು ಯಾರೇ ಹೋದರೂ ಬಂದರೂ ತೆಲೆಕೆಡಿಸಿಕೊಳ್ಳಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ