ಆ್ಯಪ್ನಗರ

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್‌ ಕಾರ‍್ಯಕರ್ತರ ಪ್ರತಿಭಟನೆ

ವಿಕ ಸುದ್ದಿಲೋಕ ಮಂಡ್ಯ ಉತ್ತರ ಪ್ರದೇಶದ ಹತ್ಯೆಗೊಳಗಾಗಿದ್ದ ಬುಡಕಟ್ಟು ಸಮುದಾಯದವರ ಕುಟುಂಬ ಭೇಟಿಗೆ ಹೋಗುತ್ತಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ...

Vijaya Karnataka 21 Jul 2019, 5:00 am
ಮಂಡ್ಯ: ಉತ್ತರ ಪ್ರದೇಶದ ಹತ್ಯೆಗೊಳಗಾಗಿದ್ದ ಬುಡಕಟ್ಟು ಸಮುದಾಯದವರ ಕುಟುಂಬ ಭೇಟಿಗೆ ಹೋಗುತ್ತಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Vijaya Karnataka Web congress workers protest against priyankas arrest
ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್‌ ಕಾರ‍್ಯಕರ್ತರ ಪ್ರತಿಭಟನೆ


ಸರ್‌ ಎಂವಿಪ್ರತಿಮೆ ಎದುರು ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಉತ್ತರ ಪ್ರದೇಶದ ಪೊಲೀಸರು ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಗುಂಡಿನ ದಾಳಿಗೆ ಒಳಗಾಗಿ ಪ್ರಾಣತೆತ್ತ ಹತ್ತು ಮಂದಿಯ ಕುಟುಂಬದವರನ್ನು ಭೇಟಿ ಮಾಡಲು ಸೋನ್‌ ಭದ್ರಕ್ಕೆ ಹೊರಟಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಪೊಲೀಸರು ತಡೆಯುವ ಜತೆಗೆ ಪೊಲೀಸ್‌ ವಶಕ್ಕೆ ಪಡೆದಿರುವುದು ಸರಿಯಲ್ಲ ಎಂದು ಖಂಡಿಸಿದರು.

ಸೋನ್‌ಭದ್ರದ ಘೋರ್‌ವಾಲ್‌ ಪ್ರದೇಶದಲ್ಲಿ ಜಮೀನೊಂದಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖ್ಯಸ್ಥ ಹಾಗೂ ಗೊಂಡ ಬುಡಕಟ್ಟು ಜನರ ಮಧ್ಯೆ ಮಾರಾಮಾರಿ ನಡೆದಿತ್ತು. ಬುಡಕಟ್ಟು ಜನರ ಮೇಲೆ ಗ್ರಾಮದ ಮುಖ್ಯಸ್ಥರ ಕಡೆಯವರು ಗುಂಡಿನದಾಳಿ ನಡೆಸಿದ್ದರಿಂದ 10 ಮಂದಿ ಸಾವಿಗೀಡಾಗಿ, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇಂತಹ ಘಟನೆಗಳು ನಡೆಯುತ್ತಿರುವ ಉತ್ತರ ಪ್ರದೇಶದಲ್ಲಿ ಆಡಳಿತ ಯಂತ್ರ ಕುಸಿದಿದೆ. ಕಕ್ಷಣ ಮುಖ್ಯಮಂತ್ರಿಯೋಗಿ ಆದಿತ್ಯನಾಥ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವುದರಿಂದ ಕಾಂಗ್ರೆಸ್‌ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. ನಮ್ಮ ಹೋರಾಟವು ಅಸ್ಪೃಶ್ಯತೆಯಿಂದ ನಲುಗುತ್ತಿರುವವರಿಗೆ ದನಿಯಾಗಿ ನಿಲ್ಲುವುದಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೌನವಹಿಸಿದ್ದಾರೆ. ಉತ್ತರ ಪ್ರದೇಶದ ಸರಕಾರ ಆ ಕೊಲೆಗಳನ್ನು ಮುಚ್ಚಿಡುವ ತಂತ್ರಕ್ಕೆ ಹೋಗಿದೆ. ಅದನ್ನು ಬೆಳಕಿಗೆ ತರುವ ಕೆಲಸ ಕಾಂಗ್ರೆಸ್‌ ಮಾಡಿದೆ. ಬುಡಕಟ್ಟು ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್‌.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್‌, ಮೈಷುಗರ್‌ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಜಿ.ಪಂ. ಮಾಜಿ ಸದಸ್ಯ ಚಂದೂಪುರ ಪಾಪಣ್ಣ, ನಗರಸಭೆ ಮಾಜಿ ಸದಸ್ಯರಾದ ಮಹೇಶ್‌, ಬಿ.ಪಿ.ಪ್ರಕಾರ್ಶ, ಮುಖಂಡರಾದ ಸಿ.ಎಂ.ದ್ಯಾವಪ್ಪ, ಗುರುಪ್ರಸಾದ್‌, ಮಂಜುನಾಥ್‌, ಚಿದಂಬರ್‌ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ