ಆ್ಯಪ್ನಗರ

ಸಂವಿಧಾನ ಸಮರ್ಪಣಾ ದಿನಾಚರಣೆ

ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಹೇಳಿದರು.

Vijaya Karnataka 30 Nov 2017, 5:15 am
ಮಂಡ್ಯ: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಹೇಳಿದರು.
Vijaya Karnataka Web constitution dedication day
ಸಂವಿಧಾನ ಸಮರ್ಪಣಾ ದಿನಾಚರಣೆ


ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಭವ್ಯವನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಬುದ್ಧಭಾರತ ಫೌಂಡೇಷನ್ ಆಯೋಜಿಸಿದ್ದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಸಂವಿಧಾನದ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ-ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು.

ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ. ಶ್ರೀನಿವಾಸ್ ಮಾತನಾಡಿ, ದೇಶದಲ್ಲಿ ಕೋಮು ಭಾವನೆ, ಪ್ರಜಾಪ್ರಭುತ್ವದ ಅಣಕ, ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ. ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರಕಾರಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂವಿಧಾನ ಉಳಿವಿಗಾಗಿ ಭಾರಿ ಹೋರಾಟಗಳೇ ಆರಂಭವಾಗಿ ಇಡೀ ದೇಶ ಕತ್ತಲ ಕೂಪಕ್ಕೆ ತಳ್ಳಲ್ಪಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಬುದ್ಧಭಾರತ ಫೌಂಡೇಷನ್ ಅಧ್ಯಕ್ಷ, ವಕೀಲ ಜೆ.ರಾಮಣ್ಣ ಮಾತನಾಡಿ, ಸಂವಿಧಾನದ ಮೂಲ ಆಶಯಗಳು ಮತ್ತು ಕಾನೂನು ಅಂಶಗಳನ್ನು ಶೇ.75 ಭಾಗದಷ್ಟು ಮಂದಿ ತಿಳಿದುಕೊಳ್ಳದೇ ಇರುವುದರಿಂದ ಸರಕಾರಗಳು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿದೆ. ಆ ಮುಲಕ ವಿದ್ಯಾರ್ಥಿ-ಯುವ ಸಮುದಾಯಗಳಿಗೆ ಸಂವಿಧಾನ ಓದುವ, ಚರ್ಚಿಸುವ, ವಿಚಾರ ಸಂಕಿರಣಗಳನ್ನು ಆಯೋಜಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ರೈತಸಂಘದ ಮಹಿಳಾ ಉಪಾಧ್ಯಕ್ಷೆ ಅರುಣಜ್ಯೋತಿ, ಬುದ್ಧ ಭಾರತ ಫೌಂಡೇಷನ್‌ನ ಖಜಾಂಚಿ ಆಶಾಜ್ಯೋತಿ, ದಸಂಸ ಮುಖಂಡರಾದ ಬಸವರಾಜು, ಮಾರ್ಕಾಲು ನಟರಾಜು, ಪವನ್, ಮಲ್ಲಪ್ಪ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ