ಆ್ಯಪ್ನಗರ

ದೇಶದ ಪ್ರಗತಿಗೆ ಕೊಡುಗೆ ನೀಡಿ

ವಿಜ್ಞಾನ ವಿದ್ಯಾರ್ಥಿಗಳು ಆಳವಾದ ಅಧ್ಯಯನ ಮಾಡುವ ಮೂಲಕ ಹೊಸ, ಹೊಸ ಆವಿಷ್ಕಾರ ಗಳನ್ನು ಕಂಡು ಹಿಡಿಯಬೇಕು. ದೇಶಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸಲಹೆ ನೀಡಿದರು.

Vijaya Karnataka 12 Dec 2017, 5:15 am
ಶ್ರೀರಂಗಪಟ್ಟಣ: ವಿಜ್ಞಾನ ವಿದ್ಯಾರ್ಥಿಗಳು ಆಳವಾದ ಅಧ್ಯಯನ ಮಾಡುವ ಮೂಲಕ ಹೊಸ, ಹೊಸ ಆವಿಷ್ಕಾರ ಗಳನ್ನು ಕಂಡು ಹಿಡಿಯಬೇಕು. ದೇಶಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸಲಹೆ ನೀಡಿದರು.
Vijaya Karnataka Web contribute to the countrys progress
ದೇಶದ ಪ್ರಗತಿಗೆ ಕೊಡುಗೆ ನೀಡಿ


ಶ್ರೀರಂಗಪಟ್ಟಣ ಹೊರವಲಯದಲ್ಲಿರುವ ಪರಿವರ್ತನ ಶಾಲೆಯಲ್ಲಿ ನಡೆದ ಪರಿವರ್ತ ನೋತ್ಸವ ಸಮಾರೋಪ ಕಾರ‌್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವೈಜ್ಞಾನಿಕತೆ ಮುಂದುವರಿದಿದೆ. ವಿದ್ಯಾರ್ಥಿ ಗಳು ವಿಜ್ಞಾನದ ಮಹತ್ವ ತಿಳಿಯಬೇಕು. ವೈಜ್ಞಾನಿಕವಾಗಿ ಸಾಧನೆ ಮಾಡುವ ಮೂಲಕ ದೇಶದ ಪ್ರಗತಿಗೆ ಸಹಕರಿಸಬೇಕು. ಪ್ರಸ್ತುತ ದಿನಗಳಲ್ಲಿ ಪೋಷಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಅದು ಸಲ್ಲದು ಅವರ ಸಾಧನೆಗೆ ತಾಳ್ಮೆಯಿಂದ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ನಿವತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಲಾಭ ನೀಡುವ ಉದ್ಯಮವಾಗಬಾರದು. ಶೈಕ್ಷಣಿಕ ಚಟುವ ಟಿಕೆಗೆ ಪೂರಕವಾದ ಬೋಧನೆ, ತರಬೇತಿ ನೀಡಬೇಕು. ಖಾಸಗಿ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ವಯುಕ್ತಿಕ ಜೀವನ ಪ್ರಗತಿಯತ್ತ ಸಾಗಿದರೆ ತನ್ನಿಂದ ತಾನೇ ಆ ಶಾಲೆಯ ಕೀರ್ತಿಯೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು.

ಮುಕ್ತ ವಿವಿ ವಿಶ್ರಾಂತ ಉಪಕುಲಪತಿ ರಾಮೇಗೌಡ, ಪರಿವರ್ತನ ಹಾಗೂ ಓಂ ಶ್ರೀನಿಕೇತನ ಟ್ರಸ್ಟ್‌ನ ಅಧ್ಯಕ್ಷ ಎಂ.ಪುಟ್ಟೇಗೌಡ ,ಪರಿವರ್ತನ ಶಾಲೆಯ ಡೀನ್ ಚೇತನ್ ರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ರುಕ್ಸಾನಾ ನಾಜನೀನ್, ಖಜಾಂಚಿ ಬಿ.ವಿ.ಕುಮಾರ್, ಗೋಪಾಲಗೌಡ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ