ಆ್ಯಪ್ನಗರ

ಕೊರೊನಾ ಭೀತಿಗೆ ಮಂಡ್ಯ ಸ್ತಬ್ಧ: ನಿಷೇಧಾಜ್ಞೆ ಜಾರಿ!

ಕೊರೋನಾ ವೈರಸ್ ಸೋಂಕಿನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

Vijaya Karnataka Web 23 Mar 2020, 5:40 pm
ಮಂಡ್ಯ: ಕೊರೋನಾ ವೈರಸ್ ಸೋಂಕಿನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ವಹಿಸಿದ್ದು, ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಗುಂಪು ಗುಂಪಾಗಿ ಸೇರಬಾರದು, ಸಾರ್ವಜನಿಕವಾಗಿ ಯಾವುದೇ ಸಮಾರಂಭದಲ್ಲಿ ಭಾಗವಹಿಸಬಾರದು ಎಂದು ತಿಳಿಸಿದ್ದಾರೆ.
Vijaya Karnataka Web Coronavirus


ಮಂಡ್ಯ ಜಿಲ್ಲೆಯಲ್ಲಿ ಹೊರ ದೇಶಗಳಿಂದ ಬಂದಂತಹ 125 ಜನರನ್ನ ಹೋಂ ಕ್ವಾರಂಟಿನಲ್ಲಿಡಲಾಗಿದೆ,
ಮೂರು ಪ್ರಕರಣಗಳು ಕೊರೋನಾ ನೆಗೆಟಿವ್ ಕಂಡು ಬಂದಿದೆ. ಬೆಸಗರಹಳ್ಳಿಯಲ್ಲಿ 65ವರ್ಷದ ಒಬ್ಬ ವ್ಯಕ್ತಿ ಮೆಕ್ಕಾದಿಂದ ಬಂದಿದ್ದಾರೆ. ಮುಂಜಾಗೃತ ಕ್ರಮವಾಗಿ ಅವರನ್ನ ಐಸೊಲೇಷನ್ನಲ್ಲಿ ಇಡಲಾಗಿದೆ. ಆದರೆ ಅವರಿಗೆ ಕೊರೊನಾ ಸೋಮಕು ಇಲ್ಲ ಎಂದು ತಿಳಿಸಿದರು.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ:
ಸಾಮಾಜಿಕ ಜಾಲತಾಣದ ಹರಡುತ್ತಿರುವ ಸುಳ್ಳು ಸುದ್ದಿ ವಿಚಾರ ಕುರಿತು ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು. ಪೋಲಿಸ್ ಅಧಿಕಾರಿಗಳಿಗೆ, ಮಾಧ್ಯಮದವರಿಗೆ ಅನವಶ್ಯಕ ವಾಗಿ ಕರೆ ಮಾಡಿ ತಪ್ಪು ಮಾಹಿತಿ ನೀಡಿದ್ದಲ್ಲಿ ಇದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಶಂಕಿತರು ಅಥವಾ ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ಅತ್ತಿರದ ಆಸ್ಪತ್ರೆಯ ವೈದ್ಯರಿಗೆ ತಿಳಿಸಿ ಎಂದು ಹೇಳಿದರು.

ಕೊರೊನಾ ಸೋಂಕಿಗೆ ದೇಶದಲ್ಲಿ 8ನೇ ಬಲಿ: ಕೋಲ್ಕತದಲ್ಲಿ ಮೊದಲ ಸಾವು!

ಮುನ್ನೆಚ್ಚರಿಕೆ ಕ್ರಮವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಹಾಗೂ ಜಿಲ್ಲಾಡಳಿತದ ವತಿಯಿಂದ ಕೊರೋನಾ ವಾರಿಯರ್ಸ್‌ ಹಾಗೂ ಕೊರೋನಾ ಸೈನಿಕರನ್ನ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 20 ಜನರನ್ನ ಗುರುತಿಸಲಾಗಿದೆ, ಪ್ರತಿ ತಾಲ್ಲೂಕು ಮಟ್ಟದಲ್ಲಿ 5 ಜನರನ್ನ ನೇಮಕ ಮಾಡಿ ಕೆಲಸ ನಿರ್ವಹಣೆ ಮಾಡುತ್ತಾರೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ಮಾಹಿತಿಯನ್ನು ಕಲೆಯಾಗಿ ಜಿಲ್ಲಾಡಳಿತಕ್ಕೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುತ್ತದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದರು.

ಮಂಗಳೂರಲ್ಲಿ ಲಾಕ್‌ಡೌನ್ ಪಾಲಿಸದಿದ್ದರೆ ಕೇಸ್‌ ದಾಖಲು: ಜಿಲ್ಲಾಧಿಕಾರಿ ಆದೇಶ!

ಯುಗಾದಿ ಹಬ್ಬವನ್ನು ತಮ್ಮ ತಮ್ಮ ಮನೆಯಲ್ಲಿ ಸರಳವಾಗಿ ಅಚರಣೆ ಮಾಡಿ. ಆರೋಗ್ಯದ ದೃಷ್ಟಿಯಿಂದ ಹೆಚ್ಚು ಜನ ಸೇರದೆ ಹಬ್ಬವನ್ನು ಆಚರಿಸಿಕೊಳ್ಳಿ. ಸಂಶಯದಿಂದ ಇರುವ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ ಪೋಟ್ಟ್ ನಿರ್ಮಾಣ. ಶ್ರೀರಂಗಪಟ್ಟಣ, ನಿಡಗಟ್ಟ, ಬೆಳ್ಳೂರು, ದೇವಲಪುರಗಳಲ್ಲಿ 4 ಚೆಕ್ ಪೋಸ್ಟ್ ಮಾಡಲಾಗಿದೆ. ಕಂದಾಯ ಇಲಾಖೆ, ಪೋಲಿಸ್, ಆರೋಗ್ಯ ಇಲಾಖೆಯಿಂದ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಿಂದ SSLC ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಮಾರ್ಗದರ್ಶನ
ಪರೀಕ್ಷೆಗಳನ್ನು ಮುಂದೂಡುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪಠ್ಯಕ್ರಮಗಳನ್ನು ನುರಿತ ಶಿಕ್ಷಕರಿಂದ ನಮ್ಮ ಜಿಲ್ಲಾ ಮಟ್ಟದ ಸ್ಥಳೀಯ ವಾಹಿನಿಗಳಲ್ಲಿ ನಿಯಮಿತ ಕಾಲದಲ್ಲಿ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗುವುದು ಆದುದರಿಂದ ವಿದ್ಯಾರ್ಥಿಗಳು ಭಯ ಪಡುವ ಅವಶ್ಯಕತೆ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ