ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 11 Dec 2018, 5:00 am
ಕೆ.ಆರ್‌.ಪೇಟೆ: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt farmer suicide
ಸಾಲಬಾಧೆ: ರೈತ ಆತ್ಮಹತ್ಯೆ


ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಗುಡುಗನಹಳ್ಳಿ ಗ್ರಾಮದ ಅಶೋಕ್‌(45) ಮೃತರು.

ಮೃತರಿಗೆ ಎರಡೂವರೆ ಎಕರೆ ಜಮೀನಿದ್ದು, ಸಾಲ ಮಾಡಿ ಕೊಳವೆ ಬಾವಿ ಕೊರೆಸಿದ್ದರು. ಆದರೆ ಇದರಲ್ಲಿ ಸರಿಯಾಗಿ ನೀರು ಬಂದಿರಲಿಲ್ಲ. ಹೀಗಾಗಿ ಸ್ವಲ್ಪ ಜಮೀನಿನಲ್ಲಿ ಮಾತ್ರ ಬಾಳೆ ಹಾಗೂ ಭತ್ತ ಬೆಳೆದಿದ್ದರು. ಇದರಲ್ಲೂ ಸಾಕಷ್ಟು ನಷ್ಟವಾಗಿದ್ದರಿಂದ ಸಾಲ ಹಿಂದಿರುಗಿಸಲು ಸಾಧ್ಯವಾಗದೇ ಸೋಮವಾರ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಕೆ.ಆರ್‌.ನಗರ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

ಸೋಮನಹಳ್ಳಿ ಬ್ಯಾಂಕಿನಲ್ಲಿ 60 ಸಾವಿರ ರೂ, ಸ್ವಸಹಾಯ ಸಂಘದಿಂದ 80 ಸಾವಿರ ರೂ. ಹಾಗೂ 3 ಲಕ್ಷ ರೂ.ಗೂ ಹೆಚ್ಚು ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೃತರ ಪುತ್ರ ಕಿರಣ್‌ಕುಮಾರ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಸಬ್‌ ಇನ್ಸ್‌ಪೆಕ್ಟರ್‌ ಆನಂದಗೌಡ, ಜಿಪಂ ಸದಸ್ಯ ಬಿ.ಎಲ್‌.ದೇವರಾಜು, ತಾಪಂ ಸದಸ್ಯೆ ಸತ್ಯಮ್ಮ ತಿಮ್ಮೇಗೌಡ ಇತರರು ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ