ಆ್ಯಪ್ನಗರ

ಸಾಲ ಬಾಧೆ: ರೈತ ಮಹಿಳೆ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 20 Jul 2019, 5:00 am
ಕೆ.ಆರ್‌.ಪೇಟೆ: ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt impact farmer woman commits suicide
ಸಾಲ ಬಾಧೆ: ರೈತ ಮಹಿಳೆ ಆತ್ಮಹತ್ಯೆ


ತಾಲೂಕಿನ ಆಲಂಬಾಡಿಕಾವಲು ಗ್ರಾಮದ ದಲಿತ ಕಾಲನಿಯ ನಿವಾಸಿ ಲೇಟ್‌ ಚೆಲುವಯ್ಯ ಅವರ ಪತ್ನಿ ಜಯಮ್ಮ(63) ಮೃತರು.

ಗ್ರಾಮದಲ್ಲಿ ಸುಮಾರು ಎರಡು ಎಕರೆ ಭೂಮಿಯನ್ನು ಹೊಂದಿರುವ ಜಯಮ್ಮ ಅವರು ಕೊಳವೆ ಬಾವಿಯನ್ನು ಕೊರೆಸಿ ಬೇಸಾಯ ಮಾಡಲು ಮುಂದಾಗಿದ್ದರು. ಬೇಸಾಯಕ್ಕಾಗಿ ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲಿ ್ಲ(ಸೊಸೈಟಿ) 75 ಸಾವಿರ ಬೆಳೆ ಸಾಲ, ಜೊತೆಗೆ ಐದಾರು ಲಕ್ಷ ರೂ. ಕೈಸಾಲ ಮಾಡಿದ್ದರು. ಅಲ್ಲದೆ ಹೇಮಾವತಿ ನಾಲೆಯ ವ್ಯಾಪ್ತಿಯಲ್ಲಿರುವ ರೈತ ಮಹಿಳೆಯ ಜಮೀನಿಗೆ ನೀರು ಹರಿಸದೇ ಇರುವ ಕಾರಣ ಕೊಳವೆ ಬಾವಿಯಲ್ಲಿ ಅಂತರ್ಜಲ ಬತ್ತಿಹೋಗಿತ್ತು. ಇದರಿಂದ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಪರಿಣಾಮ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಮೃತಪಟ್ಟರು ಎಂದು ಕುಟುಂಬದವರು ತಿಳಿಸಿದ್ದಾರೆ. ಜಯಮ್ಮ ಅವರಿಗೆ ಆರು ಮಂದಿ ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಆನಂದೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಆಲಂಬಾಡಿಕಾವಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಎಂ.ಸಂಜೀವಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ನಂಜುಂಡೇಗೌಡ, ಜಿ.ಪಂ.ಮಾಜಿ ಸದಸ್ಯ ಬಿ.ನಾಗೇಂದ್ರಕುಮಾರ್‌, ಯುವ ಮುಖಂಡ ದಿವಾಕರ್‌ ಎಂ.ಗೌಡ ಮತ್ತಿತರರು ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಘಟನೆ ಕುರಿತು ಕೆ.ಆರ್‌.ಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ