ಪಾಂಡವಪುರ: ನಮ್ಮ ಸುತ್ತಮುತ್ತಲಿನ ಪರಿಸರ ಸುಂದರವಾಗಿದ್ದರೆ ನಮ್ಮ ಆರೋಗ್ಯವೂ ಚನ್ನಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರು ಗಿಡಿಮರಗಳನ್ನು ನೆಟ್ಟು ಪರಿಸರ ರಕ್ಷಿಸಬೇಕೆಂದು ಪಟ್ಟಣದ ಜೆಎಂಎಫ್ಸಿ ಹಿರಿಯ ಶ್ರೇಣಿಯ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಹೇಳಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಪಾಂಡವಪುರ, ವಕೀರ ಸಂಘ, ಆರೋಗ್ಯ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ನಡೆದ 'ವಿಶ್ವ ಆರೋಗ್ಯ ದಿನಾಚರಣೆ ಮತ್ತು ಭೂಮಿ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ಯತೇಚ್ಚ ಬಳಕೆಯಿಂದಾಗಿ ಪರಿಸರ ಹಾಳಾಗುತ್ತಿದೆಯಲ್ಲದೆ, ಭೂಮಿಯ ಫಲವತ್ತತೆ ನಾಶವಾಗುತ್ತಿದೆ. ಎಲ್ಲೆಡೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭೂಮಿಯ ರಕ್ಷ ಣೆ ಅಸಾಧ್ಯ. ಭೂಮಿಯನ್ನು ರಕ್ಷಿಸಿದರೆ ಆರೋಗ್ಯವನ್ನು ಕಾಪಾಡಿಕೊಂಡಂತೆ. ದಿನೇ ದಿನೆ ಭೂಮಿ ತಾಪಮಾನ ಹೆಚ್ಚಾಗುತ್ತಿದೆ. ಇದರಿಂದಾಗಿ ಪರಿಸರದ ಮೇಲೆ ಬಹಳಷ್ಟು ಪರಿಣಾಮ ಬೀರಲಿದೆ. ಮನುಷ್ಯ ತನ್ನ ಸ್ವಾರ್ಥ ಸಾಧನೆಗಾಗಿ ಗಿಡಮರಗಳನ್ನು ಮನಬಂದಂತೆ ಕಡಿದು ಹಾಕುತ್ತಿದ್ದಾನೆ. ಕಾಡಿಗೆ ಬಿದ್ದಬೆಂಕಿ ಕಾಡನ್ನು ಮಾತ್ರ ನಾಶಮಾಡುವುದಿಲ್ಲ. ಭೂಮಿಯನ್ನು ನಾಶಮಾಡುತ್ತದೆ. ಜಗತ್ತಿನಲ್ಲಿ ನಿತ್ಯ 500ಮಿಲಿಯನಷ್ಟು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಹಾಗಾಗಿ ಎಲ್ಲ ಸರಕಾರಗಳು ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಬೇಕು ಎಂದು ಒತ್ತಾಯಿಸಿದರು.
ಕಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ, ವಿಶ್ವ ಆರೋಗ್ಯ ಸಂಸ್ಥೆಯು 1950ರಿಂದಲೂ ಪ್ರತಿ ವರ್ಷವೂ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಿತು. ಪ್ರತಿ ವರ್ಷವೂ ಒಂದೊಂದು ಪ್ರಮುಖ ಆರೋಗ್ಯ ವಿಷಯವನ್ನು ಆರಿಸಿ, ಇದರ ಬಗ್ಗೆ ಎಲ್ಲರ ಗಮನಸೆಳೆಯಲು ಹಾಗೂ ಸರಕಾರ ಮತ್ತು ಸರಕಾರೇತನ ಸಂಸ್ಥೆಗಳು ಸಾರ್ವಜನಿಕರಿಗೆ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸುತ್ತಿದೆ. ಹಾಗಾಗಿ ಎಲ್ಲರಿಗೂ ಆರೋಗ್ಯ ಎಂಬುದಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.
ವಕೀಲ ಕೆ.ಎಸ್.ಮೋಹನ್ಕುಮಾರ್ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಕರಿಬಸವಯ್ಯ, ಸಿಡಿಪಿಒ ಓಂಕಾರಪ್ಪ, ಡಾ.ಮೋಹನ್ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ರಾಮೇಗೌಡ, ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯÜದರ್ಶಿ ಸಿ.ಎನ್.ಧನಜಂಜಯ ಇದ್ದರು.