ಆ್ಯಪ್ನಗರ

ದಿಗ್ವಿಜಯ್‌ ಸಿಂಗ್‌ ಹೇಳಿಕೆಗೆ ಯೋಧನ ಪತ್ನಿ ಆಕ್ರೋಶ

ಪುಲ್ವಾಮ ಪ್ರಕರಣ ಒಂದು ಆಕ್ಸಿಡೆಂಟ್‌ ಎಂದು ಕಾಂಗ್ರೆಸ್‌ ಮುಖಂಡ ದಿಗ್ವಿಜಯ್‌ ಸಿಂಗ್‌ ನೀಡಿರುವ ಹೇಳಿಕೆಗೆ ವೀರಯೋಧ ಗುರು ಪತ್ನಿ ಕಲಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka 6 Mar 2019, 5:00 am
ಮಂಡ್ಯ: ಪುಲ್ವಾಮ ಪ್ರಕರಣ ಒಂದು ಆಕ್ಸಿಡೆಂಟ್‌ ಎಂದು ಕಾಂಗ್ರೆಸ್‌ ಮುಖಂಡ ದಿಗ್ವಿಜಯ್‌ ಸಿಂಗ್‌ ನೀಡಿರುವ ಹೇಳಿಕೆಗೆ ವೀರಯೋಧ ಗುರು ಪತ್ನಿ ಕಲಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web digvijaya singhs statement angered by wife of soldier
ದಿಗ್ವಿಜಯ್‌ ಸಿಂಗ್‌ ಹೇಳಿಕೆಗೆ ಯೋಧನ ಪತ್ನಿ ಆಕ್ರೋಶ


''ಯಾವ ಉದ್ದೇಶದಿಂದ ಆಕ್ಸಿಡೆಂಟ್‌ ಎಂಬ ಪದ ಬಳಸಿದ್ದೀರಿ? ನಿಮ್ಮ ಬಳಿ ದಾಖಲೆ ಇದ್ದರೆ ತೋರಿಸಿ. ಅವರನ್ನು ಕಳೆದುಕೊಂಡಿರುವುದಕ್ಕೆ ಸೈನಿಕರ ಕುಟುಂಬದ ಕಷ್ಟ ನಿಮಗೇನು ಗೊತ್ತು. ನಿಮ್ಮ ಮನೆಯಲ್ಲಿ ಯಾರನ್ನಾದರೂ ಕಳೆದುಕೊಂಡಿದ್ದರೆ ನಿಮಗೆ ಗೊತ್ತಾಗುತ್ತಿತ್ತು'' ಎಂದು ಕಿಡಿ ಕಾರಿದ್ದಾರೆ.

ವಿಕ ಜತೆ ಮಾತನಾಡಿದ ಅವರು, ''ಈ ರೀತಿ ಸಾವಿಗೆ ಅವಮಾನ ಮಾಡಬೇಡಿ. ಸೈನಿಕರ ಪ್ರಾಣಕ್ಕೆ ಬೆಲೆಯೇ ಇಲ್ಲವೆ..? ಚಳಿ, ಮಳೆ, ಬಿಸಿಲೆನ್ನದೆ, ತಿನ್ನಲು ಊಟ ಇಲ್ಲದೆ ದೇಶ ಕಾಯುತ್ತಾರೆ. ಅಂಥವರ ಪ್ರಾಣಕ್ಕೆ ಬೆಲೆ ಕಟ್ಟಬೇಡಿ. ದಯವಿಟ್ಟು ಅಪಪ್ರಚಾರ ಮಾಡಬೇಡಿ. ಸತ್ಯ ತಿಳಿದು ಮಾತನಾಡಿ'' ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ