ಆ್ಯಪ್ನಗರ

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಶಿಕ್ಷಕರು ಮಕ್ಕಳಿಗೆ ಕಲಿಕೆಯ ಜತೆಗೆ ಅವರಲ್ಲಿ ಅಡಗಿ ರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿ ಸುವ ಕೆಲಸ ಮಾಡಬೇಕು ಎಂದು ತಾಲೂಕು ಪಂಚಾ ಯಿತಿ ಅಧ್ಯಕ್ಷ ಕೆ.ಎನ್.ನವೀನ್‌ಕುಮಾರ್ ಹೇಳಿದರು.

Vijaya Karnataka 13 Sep 2017, 5:15 am
ನಾಗಮಂಗಲ: ಶಿಕ್ಷಕರು ಮಕ್ಕಳಿಗೆ ಕಲಿಕೆಯ ಜತೆಗೆ ಅವರಲ್ಲಿ ಅಡಗಿ ರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿ ಸುವ ಕೆಲಸ ಮಾಡಬೇಕು ಎಂದು ತಾಲೂಕು ಪಂಚಾ ಯಿತಿ ಅಧ್ಯಕ್ಷ ಕೆ.ಎನ್.ನವೀನ್‌ಕುಮಾರ್ ಹೇಳಿದರು.
Vijaya Karnataka Web encourage and recognize the talent of children
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ


ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದಲ್ಲಿ ನಡೆದ ತಾಲೂಕು ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ‌್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಠ್ಯ ಪುಸ್ತಕದ ಓದಿನಿಂದ ಮಕ್ಕಳ ಸರ್ವ ತೋಮುಖ ಬೆಳವಣಿಗೆಗೆ ಸಾಧ್ಯವಾಗು ವುದಿಲ್ಲ. ಸಹಪಠ್ಯ ಚಟುವಟಿಕೆಗಳ ತರಬೇತಿ ನೀಡಿದಾಗ, ಮಗುವಿನ ಪೂರ್ಣವ್ಯಕ್ತಿತ್ವ ವಿಕಸನ ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸಹಕಾರಿಯಾಗಿವೆ. ಕಲೋತ್ಸವದ ಮೂಲಕ ಸ್ಥಳೀಯ ಪ್ರತಿಭೆಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ತಲುಪುವುದರಿಂದ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಒಬ್ಬ ವಿದ್ಯಾರ್ಥಿ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾನೆ ಎಂದು ಗುರುತಿ ಸಬೇಕು. ಪೋಷಕರ ಸಹಕಾರ ಪಡೆದು ಶಾಲೆಯಲ್ಲಿ ಹೆಚ್ಚಿನ ತರಬೇತಿ ನೀಡಿ ಪ್ರೋತ್ಸಾಹಿಸಿದಲ್ಲಿ ಆ ವಿದ್ಯಾರ್ಥಿ ಉತ್ತಮ ಸಾಧನೆ ಮಾಡುತ್ತಾನೆ ಎಂದರು.

ಕ್ಷೇತ್ರ ಶಿಕ್ಷಣಾಕಾರಿ ಡಿ.ಆರ್.ಅಮಿತ್ ಮಾತನಾಡಿ, ಶಿಕ್ಷಣ ದೈಹಿಕ ಹಾಗೂ ಮಾನಸಿಕವಾಗಿ ಯಾರಿಗೂ ಹೊರೆಯಾಗಬಾರದು. ಶಾಲೆಯಲ್ಲಿ ಮಕ್ಕಳಿಗೆ ನೀಡುವ ಪುಸ್ತಕ ಕೇವಲ ಮಾಹಿತಿ ಮಾತ್ರ. ಅದನ್ನು ಆ ವಿದ್ಯಾರ್ಥಿಯೇ ಪರಿಪೂರ್ಣ ವಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಅದು ಜ್ಞಾನವಾಗಿ ಪರಿವರ್ತನೆಯಾಗುತ್ತದೆ. ಆದರೆ ಇಂದಿನ ಕೆಲ ಮಕ್ಕಳು ಶಾಲೆಯಲ್ಲಿ ಶಿಕ್ಷಕರು ಏನೇ ಹೇಳಿಕೊಡದಿದ್ದರೂ ತನ್ನಷ್ಟಕ್ಕೆ ತಾನೇ ಆ ಜ್ಞಾನವನ್ನು ಪಡೆದುಕೊಂಡಿರುತ್ತಾನೆ ಎಂದರು.

ತಾ.ಪಂ. ಸದಸ್ಯ ಪ್ರಕಾಶ್, ತಾಪಂ ಇಒ ಎಂ.ಶಾಂತ, ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಅಳಿಸಂದ್ರ ದಿನೇಶ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಕಾರಿ ಡಿ.ಕುಮಾರ್, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ.ಕುಮಾರ್, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ರವೀಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ನಾಗೇಶ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ