ಆ್ಯಪ್ನಗರ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

ಪ್ರಸ್ತುತ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಪರಿಸರವನ್ನು ಉಳಿಸಿ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಗುರುವಿನಪುರ ಮಠದ ಜಗದೀಶ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

Vijaya Karnataka 11 Dec 2017, 5:15 am
ಮದ್ದೂರು: ಪ್ರಸ್ತುತ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಪರಿಸರವನ್ನು ಉಳಿಸಿ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಗುರುವಿನಪುರ ಮಠದ ಜಗದೀಶ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
Vijaya Karnataka Web environmental protection is everybodys duty
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ


ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ವಲಯ ಮಟ್ಟದ ಸಾಧನಾ ಸಮಾವೇಶ ಹಾಗೂ ಧಾರ್ಮಿಕ ಕಾರ‌್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮಾನವನ ದುರಾಸೆಯಿಂದಾಗಿ ಬಹತ್ ಅರಣ್ಯ ಪ್ರದೇಶಗಳು ಕೈಗಾರಿಕಾ ಕಟ್ಟಡಗಳು, ಮನೆ, ರೆಸಾರ್ಟ್‌ಗಳೂ ಸೇರಿದಂತೆ ವಿವಿಧ ಬಗೆಯ ಉದ್ಯಮ ಕೇಂದ್ರಗಳಾಗಿ ಮಾರ್ಪಾಡಾಗುತ್ತಿರುವ ದಿನಗಳಲ್ಲಿ ಪ್ರತಿಯೊಬ್ಬರು ಎಚ್ಚೆತ್ತು ಕೊಂಡು ಪರಿಸರ ಉಳಿವಿಗೆ ಮುಂದಾ ಗುವ ಮೂಲಕ ಪ್ರಾಕತಿಕ ಸಂಪತ್ತನ್ನು ಉಳಿಸಲು ಪಣತೊಡಬೇಕು ಎಂದು ಹೇಳಿದರು.

ಆರ್.ಕೆ. ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್‌ರಾಮಕಷ್ಣ ಮಾತನಾಡಿ, ಸ್ಥಳೀಯ ಸಾರ್ವಜನಿಕರು ತಮ್ಮ ಜಮೀನು, ಹೊಲಗದ್ದೆಗಳಲ್ಲಿ ಗಿಡ ನೆಡುವ ಮೂಲಕ ಪರಿಸರ ಉಳಿವಿಗೆ ಮುಂದಾಗಬೇಕು. ಶಿಕ್ಷಕರು, ವಿದ್ಯಾರ್ಥಿ ಗಳಿಗೆ ಪರಿಸರದ ಬಗ್ಗೆ ಜಾಗತಿ ಮೂಡಿ ಸುವ ಕೆಲಸ ಮಾಡಬೇಕು ಎಂದರು.

ವಿವಿಧ ಗ್ರಾಮಗಳ ಸುತ್ತಮುತ್ತಲಿನ ಸ್ಥಳೀಯ ಗ್ರಾಮಸ್ಥರಿಗೆ ಹಾಗೂ ಪ್ರತಿನಿಧಿಗಳಿಗೆ ಒಂದು ಸಾವಿರಕ್ಕೂ ಹೆಚ್ಚು ಗಿಡಗಳನ್ನು ವಿತರಿಸಲಾಯಿತು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಬೋರಯ್ಯ, ತಾ.ಪಂ. ಸದಸ್ಯರಾದ ಸುಧಾಕಷ್ಣ, ಸುಮಕರಿಯಪ್ಪ, ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿಸ್ವಾಮಿ, ಸದಸ್ಯರಾದ ನಟರಾಜು, ಶಿವಮ್ಮ, ಜಿಲ್ಲಾ ಯೋಜನಾಧಿಕಾರಿ ಯೋಗೇಶ್, ತಾಲೂಕು ಯೋಜನಾಧಿಕಾರಿ ಪಿ.ಜಯಾ ನಂದ, ನಿವತ್ತ ಸೈನಿಕ ಸತೀಶ್, ಮುಖಂ ಡರಾದ ಲಿಂಗೇಗೌಡ, ಮಹದೇವು, ನಂದೀಶ್, ಶಿವಮಲ್ಲಯ್ಯ, ತಿಮ್ಮಯ್ಯ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ