ಆ್ಯಪ್ನಗರ

ಮಂಡ್ಯದಿಂದ ಗೌಡರು ಸ್ಪರ್ಧಿಸಲಿ

ಮಂಡ್ಯದಿಂದ ಗೌಡರು ಸ್ಪರ್ಧಿಸಲಿ -ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ವರಿಷ್ಠರಿಗೆ ಬಿಟ್ಟದ್ದು: ಸಚಿವ ಸಿಎಸ್‌ಪಿ ವಿಕ ಸುದ್ದಿಲೋಕ ಮಂಡ್ಯ ಮುಂಬರುವ ಲೋಕಸಭೆ ಸಾರ್ವತ್ರಿಕ ...

Vijaya Karnataka 8 Aug 2018, 5:00 am
-ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ವರಿಷ್ಠರಿಗೆ ಬಿಟ್ಟದ್ದು: ಸಚಿವ ಸಿಎಸ್‌ಪಿ
Vijaya Karnataka Web ex pm hd devegowda contest in mandya lok sabha election
ಮಂಡ್ಯದಿಂದ ಗೌಡರು ಸ್ಪರ್ಧಿಸಲಿ


ಮಂಡ್ಯ: ಮುಂಬರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟದ್ದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

''ತಮ್ಮ ರಾಜೀನಾಮೆಯಿಂದ ತೆರವಾದ ಲೋಕಸಭೆ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿಲ್ಲ. ನೇರವಾಗಿ ಸಾರ್ವತ್ರಿಕ ಚುನಾವಣೆಯೇ ಎದುರಾಗಲಿದೆ. ಮಂಡ್ಯದಿಂದ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ನಾವೇ ಆಹ್ವಾನ ನೀಡಿದ್ದೇವೆ,''ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಡ್ಯ ಕ್ಷೇತ್ರಕ್ಕೆ ಪ್ರಜ್ವಲ್‌ ರೇವಣ್ಣ ಹೆಸರು ಕೇಳಿ ಬರುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ''ಯಾರು ಸ್ಪರ್ಧೆ ಮಾಡುತ್ತಾರೆಂಬುದು ಇನ್ನೂ ಖಚಿತವಾಗಿಲ್ಲ. ಮೈತ್ರಿಯೂ ಆಗಬಹುದು. ಇಲ್ಲದೆಯೂ ಇರಬಹುದು. ಮಾಜಿ ಸಚಿವ ಅಂಬರೀಷ್‌ ಅವರು ಬಂದರೂ ಸ್ವಾಗತ. ಇದೆಲ್ಲದರ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಪಕ್ಷದಲ್ಲೇ ಸಾಕಷ್ಟು ಮಂದಿ ಸಮರ್ಥ ಮುಖಂಡರಿದ್ದಾರೆ,''ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ