ಆ್ಯಪ್ನಗರ

ಕೌಟುಂಬಿಕ ಕಲಹ: ಮಗನನ್ನೇ ಕೊಂದ ತಂದೆ

ಮಗನನ್ನೇ ಕೊಂದ ತಂದೆ ವಿಕ ಸುದ್ದಿಲೋಕ ಮಂಡ್ಯ ತಾಲೂಕಿನ ಕೋಣನಹಳ್ಳಿ ಗ್ರಾಮದ ಎಂಜಿಬಡಾವಣೆಯಲ್ಲಿ ತಂದೆ-ಮಗನ ನಡುವಿನ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿದೆ...

Vijaya Karnataka 23 Aug 2018, 5:00 am
ಮಂಡ್ಯ: ತಾಲೂಕಿನ ಕೋಣನಹಳ್ಳಿ ಗ್ರಾಮದ ಎಂ.ಜಿ.ಬಡಾವಣೆಯಲ್ಲಿ ತಂದೆ-ಮಗನ ನಡುವಿನ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿದೆ.
Vijaya Karnataka Web family strife father killed his son
ಕೌಟುಂಬಿಕ ಕಲಹ: ಮಗನನ್ನೇ ಕೊಂದ ತಂದೆ


ಗ್ರಾಮದ ಕೃಷ್ಣಪ್ಪ ಎಂಬುವವರ ಪುತ್ರ ವಾಸುದೇವ್‌(27) ಕೊಲೆಯಾದ ಯುವಕ. ಆಸ್ತಿ ವಿಚಾರವಾಗಿ ಕೌಟುಂಬಿಕ ಕಲಹವಿತ್ತು. ಇದರಿಂದ ತಂದೆ-ಮಗನ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಅದೇ ರೀತಿ ಸೋಮವಾರ ರಾತ್ರಿಯೂ ತಂದೆ-ಮಗನ ನಡುವೆ ಜಗಳವಾಗಿತ್ತು. ಮಾತಿಗೆ ಮಾತು ಬೆಳೆದು ಪುತ್ರ ವಾಸುದೇವನ ಮೇಲೆ ತಂದೆ ಕೃಷ್ಣಪ್ಪ ಗುದ್ದಲಿಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ವಾಸುದೇವ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಕೃಷ್ಣಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಮೃತನ ಸೋದರಿ ರಾಜೇಶ್ವರಿ ನೀಡಿದ ದೂರಿನ ಮೇರೆಗೆ ಮಂಡ್ಯ ಸೆಂಟ್ರಲ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ