ಆ್ಯಪ್ನಗರ

ಸಾಲಬಾಧೆಗೆ ಅನ್ನದಾತ ಆತ್ಮಹತ್ಯೆ

ಸಾಲ ಮಾಡಿಕೊಂಡು ತೀರಿಸಲಾಗದ ರೈತನೊಬ್ಬ ಸಾವಿಗೆ ಶರಣಾಗಿದ್ದಾನೆ.

Vijaya Karnataka Web 30 Jul 2019, 11:53 am
ಮಂಡ್ಯ : ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web Death 2


ಆಲೇನಹಳ್ಳಿ ಗ್ರಾಮದ ರಾಜೇಗೌಡ(60) ಆತ್ಮಹತ್ಯೆಗೆ ಶರಣಾದ ರೈತ.

ಸುಮಾರು 3ಎಕರೆ ಜಮೀನು ಹೊಂದಿರುವ ರೈತ ರಾಜೇಗೌಡ ಆಲೇನಹಳ್ಳಿ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 3ಲಕ್ಷರೂ ಬೇಸಾಯಕ್ಕಾಗಿ ಸಾಲ ಹಾಗೂ ಮೂರ್ನಾಲ್ಕು ಲಕ್ಷರೂ ಕೈಸಾಲ ಮಾಡಿ ಬೇಸಾಯ ಮಾಡಿದ್ದರು. ಬೇಸಾಯಕ್ಕಾಗಿ ಕೊಳವೆ ಬಾವಿ ಕೊರೆಸಿದ್ದರು.

ಮಳೆಯಿಲ್ಲದ ಕಾರಣ, ಅಂತರ್ಜಲ ಕುಸಿದ ಬೆಳೆಗಳು ಒಣಗುತ್ತಿದ್ದವು. ಇದರಿಂದ ಮನನೊಂದ ರಾಜೇಗೌಡ ನಿನ್ನೆ ಸಂಜೆ ತನ್ನ ಜಮೀನಿನಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.

ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗದ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು‌ ಕುಟುಂಬದ ಮೂಲಗಳು ತಿಳಿಸಿವೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ