ಆ್ಯಪ್ನಗರ

ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಕರಡಕೆರೆಯಲ್ಲಿ ನಡೆದಿದೆ.

ವಿಕ ಸುದ್ದಿಲೋಕ 25 May 2017, 9:00 am
ಭಾರತೀನಗರ: ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಕರಡಕೆರೆಯಲ್ಲಿ ನಡೆದಿದೆ.
Vijaya Karnataka Web farmer suicides consumed by poison
ವಿಷ ಸೇವಿಸಿ ರೈತ ಆತ್ಮಹತ್ಯೆ


ಗ್ರಾಮದ ಎಚ್‌.ಹನುಮೇಗೌಡ(55) ಆತ್ಮಹತ್ಯೆ ಮಾಡಿಕೊಂಡವರು. ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳಿದ್ದಾಳೆ.

ಕಳೆದ ಮಂಗಳವಾರ ಬೆಳಗ್ಗೆ ಹನುಮೇಗೌಡರು ತಮ್ಮ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಮಧ್ಯಾಹ್ನದ ವೇಳೆಗೆ ಗ್ರಾಮದ ಪಕ್ಕದ ಜಮೀನಿನ ರೈತರು ಇದನ್ನು ನೋಡಿದ್ದು, ತಕ್ಷ ಣವೇ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ

ಚಿಕತ್ಸೆ ಫಲಕಾರಿಯಾಗದೆ ಹನುಮೇಗೌಡ ರಾತ್ರಿ 7ರ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಶವ ಪರೀಕ್ಷೆ ನಡೆಸಿ, ವಾರಸುದಾರರಿಗೆ ಶವವನ್ನು ಒಪ್ಪಿಸಲಾಗಿದೆ.

ಮೃತ ರೈತ ಒಂದು ಎಕರೆ ಜಮೀನಿನಲ್ಲಿ ಕಬ್ಬಿನ ಬೆಳೆಯನ್ನು ಬೆಳೆದಿದ್ದು, ಉಳಿದ ಜಮೀನಲ್ಲಿ ಯಾವುದೇ ಫಸಲು ಇರಲಿಲ್ಲ. ಈತ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಲಕ್ಷ , ಪಿಎಲ್‌ಡಿ ಬ್ಯಾಂಕ್‌ನಲ್ಲಿ 68 ಸಾವಿರ ರೂ ಬೆಳೆ ಸಾಲ ಪಡೆದಿದ್ದರು. ಇದಲ್ಲದೆ 2 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸಂಬಂಧ ಬುಧವಾರ ಪತ್ನಿ ಮಂಗಳಮ್ಮ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಕೆ.ಎಂ.ದೊಡ್ಡಿ ಠಾಣಾ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ