ಆ್ಯಪ್ನಗರ

ಹೊಸಹಳ್ಳಿಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ

ವಿಕ ಸುದ್ದಿಲೋಕ ಮದ್ದೂರು ತಾಲೂಕಿನ ಕೊಪ್ಪ ಜಿಪಂ ವ್ಯಾಪ್ತಿಯ ಡಿಹೊಸಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು ಡಿಹೊಸಹಳ್ಳಿ ಗ್ರಾಮದ ಲೇ...

Vijaya Karnataka 18 Sep 2018, 5:00 am
ಮದ್ದೂರು: ತಾಲೂಕಿನ ಕೊಪ್ಪ ಜಿ.ಪಂ. ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು.
Vijaya Karnataka Web farmer suicides in poisoning in hosahalli mandya district
ಹೊಸಹಳ್ಳಿಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ


ಡಿ.ಹೊಸಹಳ್ಳಿ ಗ್ರಾಮದ ಲೇ.ಕರೀಗೌಡ ಅವರ ಪುತ್ರ ಗೂಳೀಗೌಡ(55) ಮೃತ. ಇವರಿಗೆ ಪತ್ನಿ ಯಶೋಧಮ್ಮ ಸೇರಿದಂತೆ ಇಬ್ಬರು ಮಕ್ಕಳಿದ್ದಾರೆ.

ಗೂಳೀಗೌಡ ಅವರಿಗೆ ಒಂದೂವರೆ ಎಕರೆ ಜಮೀನಿದ್ದು, ಭತ್ತ, ರಾಗಿ, ಕಬ್ಬು ಸೇರಿದಂತೆ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಿದ್ದರೆನ್ನಲಾಗಿದೆ. ಬೆಳೆ ಬೆಳೆಯಲು ಖಾಸಗಿ ವ್ಯಕ್ತಿಗಳಿಂದ ಕೈ ಸಾಲ ಹಾಗೂ ನಾನಾ ಸ್ವ ಸಹಾಯ ಸಂಘಗಳು ಮತ್ತು ಬ್ಯಾಂಕ್‌ಗಳಿಂದ 3 ಲಕ್ಷ ರೂ.ಗೂ ಅಧಿಕ ಸಾಲ ಮಾಡಿದ್ದರು. ಭಾನುವಾರ ರಾತ್ರಿ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ ಯಶೋಧಮ್ಮ ನೀಡಿದ ದೂರಿನ ಮೇರೆಗೆ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಪ್ಪ ಪ್ರಾಥಮಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ