ಆ್ಯಪ್ನಗರ

ಕಬ್ಬು ಸಾಗಣೆ ಹಣ ಪಾವತಿಗೆ ಆಗ್ರಹಿಸಿ ಮನವಿ

ಪ್ರಸಕ್ತ ಸಾಲಿನಲ್ಲಿ ರೈತರು ಕಾರ್ಖಾನೆಗೆ ಸರಬರಾಜು ಮಾಡಿರುವ ಕಬ್ಬಿನ ಹಣ ಪಾವತಿಸಲು ಅಗತ್ಯ ಕ್ರಮವಹಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ತಹಸೀಲ್ದಾರ್‌ ರೂಪ ಅವರಿಗೆ ಮನವಿ ಸಲ್ಲಿಸಿದರು.

Vijaya Karnataka 4 Oct 2018, 5:00 am
ಮದ್ದೂರು: ಪ್ರಸಕ್ತ ಸಾಲಿನಲ್ಲಿ ರೈತರು ಕಾರ್ಖಾನೆಗೆ ಸರಬರಾಜು ಮಾಡಿರುವ ಕಬ್ಬಿನ ಹಣ ಪಾವತಿಸಲು ಅಗತ್ಯ ಕ್ರಮವಹಿಸುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ತಹಸೀಲ್ದಾರ್‌ ರೂಪ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web farmers demand for sugar cane transportation charges
ಕಬ್ಬು ಸಾಗಣೆ ಹಣ ಪಾವತಿಗೆ ಆಗ್ರಹಿಸಿ ಮನವಿ


ಪಟ್ಟಣದ ತಾಲೂಕು ಕಚೇರಿಗೆ ಆಗಮಿಸಿದ ಕಬ್ಬು ಬೆಳೆಗಾರರು ತಾಲೂಕಿನ ಎನ್‌ಎಸ್‌ಎಲ್‌ ಹಾಗೂ ಭಾರತೀನಗರದ ಚಾಂಷುಗರ್‌ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬಿನ ಹಣ ಪಾವತಿಸದೆ ವಿಳಂಭಧೋರಣೆ ಅನುಸರಿಸುತ್ತಿದ್ದು ಕೂಡಲೇ ತಾಲೂಕು ಆಡಳಿತ ಅಗತ್ಯ ಕ್ರಮವಹಿಸುವಂತೆ ಒತ್ತಾಯಿಸಿದರು.

ಈಗಾಗಲೇ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿ ಎರಡು ತಿಂಗಳು ಕಳೆದಿದ್ದರೂ ರೈತರಿಗೆ ಹಣ ಪಾವತಿಸದೆ ಕಾರ್ಖಾನೆ ಅಧಿಕಾರಿಗಳು ನಿರ್ಲಕ್ಷ ್ಯ ಧೋರಣೆ ಅನುಸರಿಸುವ ಜತೆಗೆ ಉಢಾಫೆ ಉತ್ತರ ನೀಡುವ ಜತೆಗೆ ಪ್ರತಿನಿತ್ಯ ಅಲೆದಾಡಿಸುವ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದಾರೆಂದು ದೂಡಿದರು.

ರಾಜ್ಯ ಸರಕಾರ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರೂ ಕೆಲ ಬ್ಯಾಂಕ್‌ ಹಾಗೂ ಸಹಕಾರ ಸಂಘಗಳು ರೈತರಿಗೆ ನೋಟಿಸ್‌ ನೀಡುವ ಮೂಲಕ ಸಾಲ ವಸೂಲಾತಿಗೆ ಮುಂದಾಗಿದ್ದು ಕೂಡಲೇ ಕಾರ್ಖಾನೆ ಅಧಿಕಾರಿಗಳ ಸಭೆ ನಡೆಸಿ ಕಬ್ಬು ಸರಬರಾಜು ಮಾಡಿದ 15 ದಿನದೊಳಗಾಗಿ ಹಣ ಪಾವತಿಸಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರ ಎಫ್‌ಆರ್‌ಪಿ ದರ ನಿಗಧಿ ಮಾಡಿ ಜತೆಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಕಬ್ಬು ಬೆಳೆಗಾರರಿಗೆ ಹಣ ನೀಡದೆ ವಂಚಿಸುತ್ತಿದ್ದು ರೈತರ ಜತೆ ಚೆಲ್ಲಾಟವಾಡುತ್ತಿರುವ ಕಾರ್ಖಾನೆ ಅಧಿಕಾರಿಗಳ ಮೇಲೆ ಕಾನೂನು ರೀತಿಯ ಕ್ರಮವಹಿಸಿ ಕೂಡಲೇ ಕಾರ್ಖಾನೆಗೆ ಸರಬರಾಜು ಮಾಡಿರುವ ಕಬ್ಬಿನ ಹಣ ಪಾವತಿ ಮಾಡಿಸಲು ಜಿಲ್ಲಾ ಹಾಗೂ ತಾಲೂಕು ಆಡಳಿತ ಮುಂದಾಗಬೇಕೆಂದರು.

ಒಂದು ವಾರದೊಳಗಾಗಿ ಕಬ್ಬಿನ ಹಣ ಪಾವತಿಸದಿದ್ದಲ್ಲಿ ಎನ್‌ಎಸ್‌ಎಲ್‌ ಕಾರ್ಖಾನೆ ಕಚೇರಿ ಎದುರು ಅನಿದೀಷ್ಟಾವಧಿ ಧರಣಿ ಕೈಗೊಳ್ಳುವುದಾಗಿ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಚನ್ನಸಂದ್ರ ಲಕ್ಷ ್ಮಣ್‌ ಎಚ್ಚರಿಕೆ ನೀಡಿದರು.

ಕಾರ್ಖಾನೆ ಅಧಿಕಾರಿಗಳೊಂದಿಗೆ ಮಾತನಾಡಿದ ತಹಸೀಲ್ದಾರ್‌ ರೂಪ ಸರಕಾರ ಹಾಗೂ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದು ಕಬ್ಬು ಸರಬರಾಜು ಮಾಡಿದ ರೈತರಿಗೆ ಸಮರ್ಪಕವಾಗಿ ಹಣ ವಿತರಿಸುವಂತೆ ಸೂಚಿಸಿದ್ದರಲ್ಲದೇ ಒಂದು ವಾರದೊಳಗಾಗಿ ಹಣ ಪಾವತಿಸದಿದ್ದಲ್ಲಿ ನೋಟೀಸ್‌ ಜಾರಿ ಮಾಡುವುದಾಗಿ ಹೇಳಿದರು.

ಪ್ರತಿಭಟನೆ ವೇಳೆ ದಾಕ್ಷಾಯಿಣಿ, ತಮ್ಮಯ್ಯ, ರಮೇಶ್‌, ಚನ್ನಪ್ಪ, ರಾಮಣ್ಣ, ಸೋಮು ನೇತೃತ್ವವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ