ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ವಿಷ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಹೊನ್ನಲಗೆರೆಯ ಲೇ.ರಾಮಣ್ಣ ಅವರ ಪುತ್ರ ಎಚ್‌.ಆರ್‌.ರಮೇಶ್‌(42) ಮೃತರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

Vijaya Karnataka Web 21 Jun 2019, 5:00 am
ಮದ್ದೂರು : ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ವಿಷ ಕುಡಿದು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
Vijaya Karnataka Web farmers suicide for debtors
ಸಾಲಬಾಧೆ: ರೈತ ಆತ್ಮಹತ್ಯೆ


ಕೆ.ಹೊನ್ನಲಗೆರೆಯ ಲೇ.ರಾಮಣ್ಣ ಅವರ ಪುತ್ರ ಎಚ್‌.ಆರ್‌.ರಮೇಶ್‌(42) ಮೃತರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ರಮೇಶ್‌ ಅವರಿಗೆ ಒಂದು ಎಕರೆ ಜಮೀನಿದ್ದು, ಜೊತೆಗೆ ಬೇರೆಯವರ ಒಂದು ಎಕರೆ ಜಮೀನಿನಲ್ಲಿ ಪಪ್ಪಾಯಿ, ಜೋಳ, ಟೊಮ್ಯಾಟೊ, ಮೆಣಸಿನಕಾಯಿ ಹಾಗೂ ಸೌತೆಕಾಯಿ ಬೆಳೆಗಳನ್ನು ಗುತ್ತಿಗೆ ಆಧಾರದಲ್ಲಿ ಬೆಳೆಯುತ್ತಿದ್ದರು. ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಹಾಗೂ ಜಮೀನಿನಲ್ಲಿ ಬೆಳೆಗಳನ್ನು ಬೆಳೆಯಲು ಕೆ.ಹೊನ್ನಲಗೆರೆ ವಿಎಸ್‌ಎಸ್‌ಎನ್‌ಬಿಯಲ್ಲಿ 50 ಸಾವಿರ, ಇತರೆ ಸ್ವಸಹಾಯ ಸಂಘಗಳಲ್ಲಿ 1.5 ಲಕ್ಷ , 4ಲಕ್ಷ ಕ್ಕೂ ಅಧಿಕ ಕೈಸಾಲ ಮಾಡಿಕೊಂಡಿದ್ದರು. ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಜತೆಗೆ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಒಣಗಿನಿಂತು ನಷ್ಟಕ್ಕೀಡಾದ ಹಿನ್ನೆಲೆಯಲ್ಲಿ ಮನನೊಂದು ರಮೇಶ್‌ ತನ್ನ ಜಮೀನಿನ ಬಳಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪತ್ನಿ ಪದ್ಮಮ್ಮ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ