ಆ್ಯಪ್ನಗರ

ತಂದೆಯಿಂದಲೇ ಮಗನ ಕೊಲೆ

ಕೌಟುಂಬಿಕ ಕಲಹದಿಂದ ತಂದೆಯೇ ಮಗನನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕು ಕೋಣನಹಳ್ಳಿ ತಿಟ್ಟು ಗ್ರಾಮದಲ್ಲಿ ನಡೆದಿದೆ.

Vijaya Karnataka Web 22 Aug 2018, 12:13 pm
ಮಂಡ್ಯ: ಕೌಟುಂಬಿಕ ಕಲಹದಿಂದ ತಂದೆಯೇ ಮಗನನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕು ಕೋಣನಹಳ್ಳಿ ತಿಟ್ಟು ಗ್ರಾಮದಲ್ಲಿ ನಡೆದಿದೆ.
Vijaya Karnataka Web death jpge


ವಾಸು(26) ಕೊಲೆಯಾದ ಯುವಕ. ತಂದೆ ಕೃಷ್ಣಪ್ಪ ಮಗನ ಮೇಲೆ ಮನೆಯಲ್ಲೇ ಹಲ್ಲೆ ಮಾಡಿ ಕೊಂದಿದ್ದ. ಬೇರೆಯವರು ಕೊಲೆ ಮಾಡಿದ್ದಾರೆ ಎಂದು ಬಿಂಬಿಸಲು ಶವವನ್ನು ಮನೆ ಎದುರು ಬಿಸಾಡಿದ್ದ .

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಶ್ವಾನದಳ, ಬೆರಳಚ್ಚು ತಜ್ಞರು ಮತ್ತು ಪೊಲೀಸರ ತಂಡ ಪರಿಶೀಲನೆ ನಡೆಸಿದಾಗ ರಕ್ತದ ಕಲೆ ಪತ್ತೆಯಾಗಿತ್ತು. ಹೀಗಾಗಿ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಪೊಲೀಸರು ಕೃಷ್ಣಪ್ಪನನ್ನು ವಶಕ್ಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ