ಆ್ಯಪ್ನಗರ

ಕಾಲುವೆಯಲ್ಲಿ ಯುವಕನ ಶವ ಪತ್ತೆ: ತಂದೆಯಿಂದ ಕೊಲೆ ದೂರು

ಶ್ರೀರಂಗಪಟ್ಟಣ: ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಹಾಗೂ ಸಿಪಿಎಡ್‌ ಕಾಲೇಜು ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಹರಿಯುವ ಕಾಲುವೆಗೆ ಯುವಕನೊಬ್ಬ ಬಿದ್ದು ಮೃತಪಟ್ಟರು.

Vijaya Karnataka 9 Jul 2018, 5:00 am
ಶ್ರೀರಂಗಪಟ್ಟಣ: ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಹಾಗೂ ಸಿಪಿಎಡ್‌ ಕಾಲೇಜು ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಹರಿಯುವ ಕಾಲುವೆಗೆ ಯುವಕನೊಬ್ಬ ಬಿದ್ದು ಮೃತಪಟ್ಟರು.
Vijaya Karnataka Web finding a young mans body in the canal complaint by father
ಕಾಲುವೆಯಲ್ಲಿ ಯುವಕನ ಶವ ಪತ್ತೆ: ತಂದೆಯಿಂದ ಕೊಲೆ ದೂರು


ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಸ್ವಾಮಿ ನಾಯಕ ಅವರ ಮಗ ಪ್ರದೀಪ್‌ನಾಯಕ (33) ಮೃತ. ಶನಿವಾರ ರಾತ್ರಿ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ದ್ವಿಚಕ್ರವಾಹನ ಕಾಲುವೆ ದಡದಲ್ಲಿ ಬಿದ್ದಿದ್ದರೆ, ಶವ ಕಾಲುವೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ತಂದೆ ಸ್ವಾಮಿನಾಯಕ, ''ನನ್ನ ಮಗನನ್ನು ಯಾರೋ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೆ'' ಎಂದು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ