ಆ್ಯಪ್ನಗರ

ಮಾದೇಗೌಡ, ಪುಟ್ಟರಾಜು ವಿರುದ್ಧ ಎಫ್‌ಐಆರ್‌

ಚುನಾವಣಾ ಪ್ರಚಾರದ ವೆಚ್ಚಕ್ಕಾಗಿ ಹಣ ನೀಡುವಂತೆ ಮಾಜಿ ಸಂಸದ ಜಿ.ಮಾದೇಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರನ್ನು ಕೋರಿದ್ದ ಆಡಿಯೋ ವೈರಲ್‌ ಆಗಿದ್ದ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Vijaya Karnataka 11 Apr 2019, 5:00 am
ಮಂಡ್ಯ: ಚುನಾವಣಾ ಪ್ರಚಾರದ ವೆಚ್ಚಕ್ಕಾಗಿ ಹಣ ನೀಡುವಂತೆ ಮಾಜಿ ಸಂಸದ ಜಿ.ಮಾದೇಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರನ್ನು ಕೋರಿದ್ದ ಆಡಿಯೋ ವೈರಲ್‌ ಆಗಿದ್ದ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Vijaya Karnataka Web fir against madegowda and puttaraju
ಮಾದೇಗೌಡ, ಪುಟ್ಟರಾಜು ವಿರುದ್ಧ ಎಫ್‌ಐಆರ್‌


ಯುಗಾದಿ ಹಬ್ಬದ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಮೊಬೈಲ್‌ನಲ್ಲಿ ಮಾತಾಡಿದ್ದ ಸಂಭಾಷಣೆಯ ಆಡಿಯೋ ಏ.7ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಏ. 8ರಂದು ಮಾಧ್ಯಮಗಳಲ್ಲೂ ಈ ವಿಷಯ ಪ್ರಕಟವಾಗಿತ್ತು. ಇದರ ಆಧಾರದ ಮೇಲೆ ಪ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾದ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್‌ ಜಗದೀಶ್‌ ಅವರು ಏ. 8ರಂದು ಪೊಲೀಸರಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾನೂನು ರೀತಿ ಎಫ್‌ಐಆರ್‌ ದಾಖಲಿಸುವಂತೆ ಸಹಾಯಕ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ತಾವು ದೂರು ನೀಡುತ್ತಿದ್ದು, ಈ ಇಬ್ಬರು ನಾಯಕರು ಮತದಾರರಿಗೆ ಆಮಿಷವೊಡ್ಡುವ ಸಲುವಾಗಿ ಫೋನಿನಲ್ಲಿ ಸಂಭಾಷಣೆ ನಡೆಸಿರುವುದು ಕಂಡು ಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಂಡು ಕ್ರಮ ವಹಿಸಬೇಕೆಂದು ಕೋರಿದ್ದರು. ಹೀಗಾಗಿ ಐಪಿಸಿ ಸೆಕ್ಷ ನ್‌ 171(ಇ) ಪ್ರಕಾರ ಅಸಂಜ್ಞೆಯ ದೂರು ದಾಖಲಿಸಿಕೊಂಡು ಪೊಲೀಸರು, ತನಿಖೆಗೆ ಅನುಮತಿ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಏ. 9ರಂದು ಐಪಿಸಿ 1980(ಯು/ಎಸ್‌171ಇ) ಪ್ರಕಾರ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ