ವಳಗೆರೆಹಳ್ಳಿಯಲ್ಲಿ ಅಗ್ನಿ ಅವಘಡ
ವಿಕ ಸುದ್ದಿಲೋಕ ಮದ್ದೂರು ಆಕಸ್ಮಿಕ ಬೆಂಕಿ ತಗುಲಿ ವಾಸದ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ...
ಮದ್ದೂರು: ಆಕಸ್ಮಿಕ ಬೆಂಕಿ ತಗುಲಿ ವಾಸದ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ.
ವಳಗೆರೆಹಳ್ಳಿ ಗ್ರಾಮದ ನಿಂಗೇಗೌಡ ಅವರ ಪುತ್ರ ಶಿವರಾಜು ಅವರಿಗೆ ಸೇರಿದ ಮನೆಗೆ ಬೆಂಕಿ ತಗುಲಿ 4ಲಕ್ಷ ಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಶಿವರಾಜು ಅವರು ಎಂದಿನಂತೆ ಮಧ್ಯಾಹ್ನದ ಊಟ ಮುಗಿಸಿ ಕರ್ತವ್ಯ ನಿಮಿತ್ತ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಕ್ಕಪಕ್ಕದ ನಿವಾಸಿಗಳು ಕರೆಮಾಡಿ ಶಿವರಾಜು ಅವರಿಗೆ ಸುದ್ಧಿಮುಟ್ಟಿಸಿ ಸ್ಥಳಕ್ಕಾಗಮಿಸುವಷ್ಟರಲ್ಲಿ ಮನೆಯು ಹಾಗೂ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಮನೆಯಲ್ಲಿದ್ದ ಚಿನ್ನದ ಆಭರಣಗಳು, ಆಹಾರ ಪದಾರ್ಥ, ವಸ್ತ್ರ, ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಅಕ್ಕಪಕ್ಕದ ಮನೆಗೆ ಬೆಂಕಿ ತಗುಲದಂತೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.