ಆ್ಯಪ್ನಗರ

ಮೇಲುಕೋಟೆ ಯೋಗಾನರಸಿಂಹಸ್ವಾಮಿ ಬೆಟ್ಟದಲ್ಲಿ ಆಕಸ್ಮಿಕ ಘಟನೆ: ದೇಗುಲದ ರಾಜಗೋಪುರ ಬಾಗಿಲಿಗೆ ಬೆಂಕಿ

ಮೇಲುಕೋಟೆ ಯೋಗಾನರಸಿಂಹಸ್ವಾಮಿ ಬೆಟ್ಟದಲ್ಲಿ ಆಕಸ್ಮಿಕ ಘಟನೆ ನಡೆದಿದ್ದು, ದೇಗುಲದ ರಾಜಗೋಪುರ ಬಾಗಿಲಿಗೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಭಕ್ತರು ಬಾಗಿಲ ಮೇಲೆ ಕರ್ಪೂರ ಹಚ್ಚಿದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದೆ.

Vijaya Karnataka Web 7 Jun 2020, 10:03 am
ಮೇಲುಕೋಟೆ: ಯೋಗಾನರಸಿಂಹಸ್ವಾಮಿ ಬೆಟ್ಟದ ರಾಜಗೋಪುರದ ಬಾಗಿಲಿಗೆ ಬೆಂಕಿ ಹತ್ತಿಕೊಂಡು ಸಣ್ಣ ಪ್ರಮಾಣದಲ್ಲಿ ಸುಟ್ಟು ಹೋಗಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
Vijaya Karnataka Web ಮೇಲುಕೋಟೆ ಯೋಗಾನರಸಿಂಹಸ್ವಾಮಿ


ಚಂದ್ರಗ್ರಹಣದ ದಿನವಾದ ಶುಕ್ರವಾರ ಈ ಘಟನೆ ನಡೆದಿದೆ. ದೇವಾಲಯದಲ್ಲಿ ಒಂದೆರಡು ಸಿಬ್ಬಂದಿ ಇದ್ದು ರಾಜಗೋಪುರ ಮತ್ತು ಒಳಭಾಗದ ಬಾಗಿಲು ಹಾಕಿ ವಾಡಿಕೆಯಂತೆ ದೇಗುಲದ ಒಳಾವರಣದಲ್ಲಿ ಸೇರಿಕೊಂಡಿದ್ದಾರೆ. ಪೂಜೆ ಮುಗಿದು ಬಾಗಿಲು ಹಾಕಿದ ನಂತರ ಶುಕ್ರವಾರ ಮಧ್ಯಾಹ್ನ 1.30 ರ ವೇಳೆಗೆ ಈ ಘಟನೆ ನಡೆದಿದೆ. ಭಕ್ತರು ಬಾಗಿಲ ಮೇಲೆ ಕರ್ಪೂರ ಹಚ್ಚಿದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ವಿಷಯ ತಿಳಿದ ಕೂಡಲೇ ಮಣೇಗಾರ್‌ ಮತ್ತು ಪಾರುಪತ್ತೇಗಾರರ ಗಮನಕ್ಕೆ ತಂದು ಬೆಂಕಿಯನ್ನು ನಂದಿಸಲಾಗಿದೆ. ದೇಗುಲದ ಇ.ಒ. ನಂಜೇಗೌಡ ವಿಷಯ ತಿಳಿದು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ