ಆ್ಯಪ್ನಗರ

ಭತ್ತದ ಮೆದೆಗೆ ಬೆಂಕಿ: ನಷ್ಟ

ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಗುಡುಗನಹಳ್ಳಿ ಗ್ರಾಮದಲ್ಲಿ ಕೊಯ್ಲು ಮಾಡಿ ಮೆದೆ ಹಾಕಿದ್ದ ಭತ್ತದ ಫಸಲಿಗೆ ಕಿಡಿಗೇಡಿಗಳು ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಭತ್ತ ಸುಟ್ಟು ಭಸ್ಮವಾಗಿದೆ.

Vijaya Karnataka 4 Jan 2019, 5:00 am
ಕೆ.ಆರ್‌.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಗುಡುಗನಹಳ್ಳಿ ಗ್ರಾಮದಲ್ಲಿ ಕೊಯ್ಲು ಮಾಡಿ ಮೆದೆ ಹಾಕಿದ್ದ ಭತ್ತದ ಫಸಲಿಗೆ ಕಿಡಿಗೇಡಿಗಳು ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಭತ್ತ ಸುಟ್ಟು ಭಸ್ಮವಾಗಿದೆ.
Vijaya Karnataka Web fire to the rice paddy loss
ಭತ್ತದ ಮೆದೆಗೆ ಬೆಂಕಿ: ನಷ್ಟ


ಆಲಂಬಾಡಿಕಾವಲು ಗ್ರಾಮದ ನಿವಾಸಿ ಮರಿನಂಜೇಗೌಡ ಅವರ ಮಗ ನಾಗರಾಜು ಅವರಿಗೆ ಸೇರಿದ ಜಮೀನು ಗುಡಗನಹಳ್ಳಿ ಎಲ್ಲೆಯಲ್ಲಿದ್ದು ಸುಮಾರು ಎರಡು ಎಕರೆ ಗದ್ದೆಯಲ್ಲಿ ಬೆಳೆಯಲಾಗಿದ್ದ ಭತ್ತದ ಫಸಲನ್ನು ಕೊಯ್ಲು ಮಾಡಿ ಒಕ್ಕಣೆ ಮಾಡುವ ಸಲುವಾಗಿ ಮೆದೆ ಹಾಕಿದ್ದರು. ಆದರೆ ಕಿಡಿಗೇಡಿಗಳು ಮೆದೆಗೆ ಬೆಂಕಿ ಹಚ್ಚಿದ್ದರಿಂದ ಕೆಲವೇ ನಿಮಿಷಗಳಲ್ಲಿ ಸುಟ್ಟು ಕರಲಾಗಿದೆ. ವಿಷಯ ತಿಳಿದ ಕೂಡಲೇ ಪಟ್ಟಣದ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ದೌಡಾಯಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು. ಘಟನೆಯಿಂದ ತನಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ರೈತ ನಾಗರಾಜು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ