ಆ್ಯಪ್ನಗರ

ರೈತರ ಸಾಲ ಮನ್ನಾಕ್ಕೆ ಒತ್ತಾಯ

ರೈತರ ರಾಷ್ಟ್ರೀಕತ ಬ್ಯಾಂಕ್, ಸಹಕಾರ ಸಂಘಗಳ ಹಾಗೂ ಖಾಸಗಿ ಲೇವಿದಾರರ ಸಾಲಮನ್ನ ಮಾಡಲು ಸರಕಾರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದರು.

Vijaya Karnataka 11 Sep 2017, 5:15 am
ಮದ್ದೂರು: ರೈತರ ರಾಷ್ಟ್ರೀಕತ ಬ್ಯಾಂಕ್, ಸಹಕಾರ ಸಂಘಗಳ ಹಾಗೂ ಖಾಸಗಿ ಲೇವಿದಾರರ ಸಾಲಮನ್ನ ಮಾಡಲು ಸರಕಾರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದರು.
Vijaya Karnataka Web force farmers to waive debt
ರೈತರ ಸಾಲ ಮನ್ನಾಕ್ಕೆ ಒತ್ತಾಯ


ಪಟ್ಟಣದ ಪ್ರವಾಸಿಮಂದಿರದಲ್ಲಿ ಪ್ರಾಂತ ರೈತ ಸಂಘದ ತಾಲೂಕು ಸಂಘಟನೆ ಆಯೋಜಿಸಿದ್ದ ಕಾರ‌್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ರೈತ ಸಂಕಷ್ಟ ಪರಿಸ್ಥಿತಿ ಯಲ್ಲಿದ್ದು ಬರಗಾಲದಿಂದ ತತ್ತರಿಸಿರುವ ರೈತರು ಆತ್ಮಹತ್ಯೆಗೆ ಶರಣಾಗುವ ಜತೆಗೆ ಗ್ರಾಮಗಳನ್ನು ತೊರೆದು ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದು ಸರಕಾರ ಎಚ್ಚೆತ್ತುಗೊಂಡು ಸಾಲದಿಂದ ಮುಕ್ತಿ ಹೊಂದಲು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ಜತೆಗೆ ರೇಷ್ಮೆ, ಭತ್ತ, ಕಬ್ಬು, ರಾಗಿ ದರ ನಿಗದಿ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು, ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಸರಕಾರದ ವತಿಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.

ಬರಗಾಲ ಪರಿಹಾರಕ್ಕಾಗಿ, ಸಾಲಮನ್ನಾಕ್ಕಾಗಿ ಆಗ್ರಹಿಸಿ ನಡೆಸಿದ ರೈತ ಚಳವಳಿಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ಸು ಪಡೆಯು ವಂತೆ ಒತ್ತಾಯಿಸಿದರಲ್ಲದೇ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ರೈತ ಚಳವಳಿಗಾರ ಮೇಲೆ ಮೊಕದ್ದಮೆ ಹಾಕಿರುವುದು ಸರಿಯಲ್ಲ ಎಂದು ಬೇಸರವ್ಯಕ್ತಪಡಿಸಿದರು.

ರೈತ ಚಳಿವಳಿಗಾರರ ಮೇಲೆ ಹಾಕಿರುವ ಮೊಕದ್ದಮೆ ವಾಪಾಸ್ ಪಡೆಯಬೇಕು ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ಸರಕಾರ ಕೆರೆಕಟ್ಟೆಗಳಿಗೆ ನೀರು ತುಂಬಿಸಿ ನಾಲೆಗಳ ಮೂಲಕ ನೀರು ಹರಿಸಿ ಅಲ್ಪಾವಧಿ ಬೆಳೆಗಳು ಹಾಗೂ ಬೆಳೆದುನಿಂತಿರುವ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದರು.

ಸಭೆ : ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಪ್ರಾಂತ ರೈತ ಸಂಘದ ಕಾರ‌್ಯಕರ್ತರ ಸಭೆಯನ್ನು ಕಿಸಾನ್ ಮುಕ್ತಿ ಜಾಥಾವನ್ನು ಸೆ.22 ರಂದು ಸಭೆಯನ್ನು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಯಶವಂತ್, ತಾಲೂಕು ಅಧ್ಯಕ್ಷ ಶಿವಣ್ಣ, ಪದಾಧಿಕಾರಿಗಳಾದ ರಾಮಣ್ಣ, ಭವಾನಿ, ಆನಂದ್, ಮುತ್ತುರಾಜು, ಆತ್ಮಾನಂದ, ಪುನೀತ್, ಅಪ್ಪಾಜಿ, ಜಯರಾಂ, ಲಲಿತಮ್ಮ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ