ಆ್ಯಪ್ನಗರ

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನಗಳ ಡಿಕ್ಕಿ

ಬೆಂಗಳೂರಿನಿಂದ ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಗಾವಲು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದ್ದ (ಟೇಲ್‌ ಕಾರ್‌) ಕಾರ್‌ಗೆ ಮೊದಲು ಸಣ್ಣದಾಗಿ ಅಪಘಾತ ಸಂಭವಿಸಿದೆ.

Vijaya Karnataka 9 Jan 2019, 7:19 pm
ಶ್ರೀರಂಗಪಟ್ಟಣ: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದ್ದ (ಟೇಲ್‌ ಕಾರ್‌) ಕಾರು ಸೇರಿದಂತೆ 4 ವಾಹನಗಳ ನಡುವೆ ಸರಣಿ ಅಪಘಾತ ನಡೆದಿರುವ ಘಟನೆ ತಾಲೂಕಿನ ಗೌಡಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ನಡೆದಿದೆ.
Vijaya Karnataka Web escort


ಬೆಂಗಳೂರಿನಿಂದ ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಗಾವಲು ವಾಹನದೊಂದಿಗೆ ಬೆಳಗ್ಗೆ 11.15ರ ಸಮಯದಲ್ಲಿ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ಅವರನ್ನು ಹಿಂಬಾಲಿಸುತ್ತಿದ್ದ (ಟೇಲ್‌ ಕಾರ್‌) ಕಾರ್‌ಗೆ ಮೊದಲು ಸಣ್ಣದಾಗಿ ಅಪಘಾತ ಸಂಭವಿಸಿದೆ. ಆಗ ಕಾರು ಚಾಲಕ ಬ್ರೇಕ್‌ ಹಾಕಿದ್ದರಿಂದ ಸಾಲಿನಲ್ಲಿ ಬರುತ್ತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿಹೊಡೆದುಕೊಂಡಿವೆ.

ಈ ಘಟನೆಯಲ್ಲಿ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ