ಆ್ಯಪ್ನಗರ

ಸಾವಿನಲ್ಲೂ ಒಂದಾದ ರೈತ ದಂಪತಿ

ಸಾವಿನಲ್ಲೂ ಒಂದಾದ ರೈತ ದಂಪತಿ ವಿಕ ಸುದ್ದಿಲೋಕ ಹಲಗೂರು (ಮಂಡ್ಯ) ಮಳವಳ್ಳಿ ತಾಲೂಕು ಹಲಗೂರು ಹೋಬಳಿಯ ಹುಲ್ಲಹಳ್ಳಿ ಗ್ರಾಮದಲ್ಲಿ ರೈತ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ...

Vijaya Karnataka 5 Aug 2018, 5:00 am
ಹಲಗೂರು (ಮಂಡ್ಯ): ಮಳವಳ್ಳಿ ತಾಲೂಕು ಹಲಗೂರು ಹೋಬಳಿಯ ಹುಲ್ಲಹಳ್ಳಿ ಗ್ರಾಮದಲ್ಲಿ ರೈತ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
Vijaya Karnataka Web former couple together even they dead in halagur hobli
ಸಾವಿನಲ್ಲೂ ಒಂದಾದ ರೈತ ದಂಪತಿ


ಗ್ರಾಮದ ಹೊಂಬೇಗೌಡ (70), ಮಂಜಮ್ಮ (65) ಮೃತರು. ಇವರಿಗೆ ಪುತ್ರ, ಪುತ್ರಿ ಇದ್ದಾರೆ. ಪುತ್ರನ ಮನೆಯಲ್ಲಿ ವಾಸವಿದ್ದರು.

ಘಟನೆ ವಿವರ: ಹೊಂಬೇಗೌಡ ಅವರಿಗೆ ಆಗಾಗ್ಗೆ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಶುಕ್ರವಾರ ರಾತ್ರಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಪತ್ನಿ ಮಂಜಮ್ಮ ಹಾಗೂ ಸಂಬಂಧಿಕರು ಮಳವಳ್ಳಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಬಾಯಾರಿಕೆಯಾಗುತ್ತಿದೆ ನೀರುಕೊಡಿ ಎಂದು ಹೊಂಬೇಗೌಡ ಕೇಳಿದ್ದಾರೆ. ಈ ವೇಳೆ ಮಂಜಮ್ಮ ಅವರು ನೀರು ಕುಡಿಸಿದ್ದು, ಇದಾದ ಸ್ವಲ್ಪ ಸಮಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಪತಿ ಮೃತಪಟ್ಟಿದ್ದನ್ನು ಕಂಡು ತೀವ್ರ ಆಘಾತಕ್ಕೊಳಗಾದ ಮಂಜಮ್ಮ ಕೂಡ ಕೆಲ ನಿಮಿಷಗಳಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಗ್ರಾಮಕ್ಕೆ ವಾಪಸ್‌ ತಂದ ಕುಟುಂಬ ವರ್ಗದವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಕುಟುಂಬದವರ ರೋದನ ಮುಗಿಲು ಮುಟ್ಟಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ