ಆ್ಯಪ್ನಗರ

ಸಚಿವರೊಬ್ಬರಿಂದ ದ್ವೇಷದ ರಾಜಕೀಯ, ಸಿಎಂ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್‌ಡಿಡಿ ಎಚ್ಚರಿಕೆ

ಸಾಮಾನ್ಯ ಕಾರ್ಯಕರ್ತರೊಬ್ಬರ ವಿರುದ್ಧ ಸಚಿವ ನಾರಾಯಣಗೌಡ ಚುನಾವಣಾ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಗಂಭೀರ ಆರೋಪ ಮಾಡಿದ್ದಾರೆ. ಸಮಸ್ಯೆ ಸರಿಪಡಿಸದೇ ಇದ್ದರೆ ಸಿಎಂ ಮನೆಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Vijaya Karnataka Web 25 Jun 2020, 2:31 pm
ಮಂಡ್ಯ: ಜಿಲ್ಲೆಯ ಕೆ.ಆರ್‌ ಪೇಟೆಯಲ್ಲಿ ದ್ವೇಷದ ರಾಜಕೀಯ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಆರೋಪಿಸಿದ್ದಾರೆ. ಪರೋಕ್ಷವಾಗಿ ಸಚಿವ ಕೆ.ಸಿ ನಾರಾಯಣ ಗೌಡ ಅವರ ವಿರುದ್ಧ ಈ ಆರೋಪ ಮಾಡಿದ್ದು ಸಮಸ್ಯೆ ಬಗೆಹರಿಯದಿದ್ದರೆ ಸಿಎಂ ಬಿ.ಎಸ್‌ ಯಡಿಯೂರಪ್ಪ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web hd devegwoda


ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತ ಹೆಚ್‌.ಟಿ ಮಂಜು ಎಂಬುವವರ ವಿರುದ್ಧ ಚುನಾವಣಾ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ದೇವೇಗೌಡರು ಆರೋಪಿಸಿದ್ದಾರೆ. ಮಂಜು ಎಂಬುವವರು ಸ್ಟೋನ್‌ ಕ್ರಷರ್‌ ಮತ್ತು ಕ್ವಾರಿ ಮೈನಿಂಗ್ ಮಾಡಲು ಸರ್ಕಾರದ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆದುಕೊಂಡರೂ ಸ್ಥಳೀಯ
ರಾಜಕಾರಣದಿಂದ ಅವರಿಗೆ ವ್ಯವಹಾರ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕೊರೊನಾ ಎಫೆಕ್ಟ್‌: ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ

ಪಕ್ಷದ ಓರ್ವ ಸಾಮಾನ್ಯ ಕಾರ್ಯಕರ್ತ ಹೆಚ್‌.ಟಿ ಮಂಜು ಎಂಬುವವರ ಮೇಲೆ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಅಲ್ಲಿಯ ಸಚಿವರು ಎಂದು ಆಕ್ರೋಶ ವ್ಯಕ್ತಪಡಿಸಿರುವ ದೇವೇಗೌಡರು, ನನ್ನ ಸುದೀರ್ಘ 60 ವರ್ಷಗಳ ರಾಜಕಾರಣದಲ್ಲಿ ಎಂದು ಕಂಡಿಲ್ಲದ ಕೆಟ್ಟ ವಾತಾವರಣ ತಾಲೂಕಿನಲ್ಲಿ ನಿರ್ಮಾಣವಾಗಿದೆ ಎಂದಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿಎಸ್‌ವೈ, ಡಿಸಿಎಂ ಹಾಗೂ ಕಂದಾಯ ಸಚಿವರಿಗೆ ಪ್ರತ್ಯೇಕ ಪತ್ರ ಬರೆಯಲಾಗಿದ್ದು ಕಾನೂನು ಬದ್ಧವಾಗಿ ವ್ಯವಹಾರ ನಡೆಸಲು ಅವಕಾಶ ನೀಡುವಂತೆ ವಿನಂತಿ ಮಾಡಿದ್ದಾರೆ. ಸರ್ಕಾರ ಈ ಬಗ್ಗೆ ಪಾರದರ್ಶಕತೆ ತೋರಿಸದೇ ಇದ್ದಲ್ಲಿ 29 ರಂದು ಸಿಎಂ ಬಿಎಸ್‌ವೈ ನಿವಾಸದ ಮುಂದೆ ಧರಣಿ ಸತ್ಯಾಗ್ರಹ ಕೂರುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ