ಆ್ಯಪ್ನಗರ

ಬಸ್‌-ಕಾರು ಡಿಕ್ಕಿ: ನಾಲ್ವರು ಸಾವು

ಮೈಸೂರು- ಬೆಂಗಳೂರು ಹೆದ್ದಾರಿಯ ಮದ್ದೂರು ಪಟ್ಟಣ ಹೊರವಲಯದ ಗೆಜ್ಜಲಗೆರೆ ಕಾಲನಿ ಸಮೀಪ ಶನಿವಾರ ಮಧ್ಯಾಹ್ನ ಸಾರಿಗೆ ಸಂಸ್ಥೆ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

Vijaya Karnataka 28 Jul 2019, 5:00 am
ಮದ್ದೂರು: ಮೈಸೂರು- ಬೆಂಗಳೂರು ಹೆದ್ದಾರಿಯ ಮದ್ದೂರು ಪಟ್ಟಣ ಹೊರವಲಯದ ಗೆಜ್ಜಲಗೆರೆ ಕಾಲನಿ ಸಮೀಪ ಶನಿವಾರ ಮಧ್ಯಾಹ್ನ ಸಾರಿಗೆ ಸಂಸ್ಥೆ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.
Vijaya Karnataka Web four killed in bus car collision
ಬಸ್‌-ಕಾರು ಡಿಕ್ಕಿ: ನಾಲ್ವರು ಸಾವು


ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಬಲಬದಿಯ ರಸ್ತೆಗೆ ಚಲಿಸಿ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಡಿಕ್ಕಿಯೊಡೆದ ರಭಸಕ್ಕೆ ಕಾರಿನಲ್ಲಿದ್ದ ಮಂಡ್ಯ ತಾಲೂಕು ಹೆಬ್ಬಕವಾಡಿ ಗ್ರಾಮದ ಪುತ್ರ ರವಿ (31), ಅವರ ಪತ್ನಿ ಮಂಜುಳಾ(28) ಪುತ್ರಿ ಸುಕನ್ಯ(ಲಾಲಿ)(10) ಹಾಗೂ ಪುತ್ರ ಸಾಗರ್‌(6) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ವಾಸವಾಗಿದ್ದ ರವಿ ಟಿವಿ ಕೇಬಲ್‌ ವಿತರಕನಾಗಿದ್ದು, ಸ್ವಗ್ರಾಮಕ್ಕೆ ಕುಟುಂಬ ಸಮೇತ ಕಾರಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ವೇಳೆ ಮೈಸೂರು, ಬೆಂಗಳೂರು ಹೆದ್ದಾರಿ ವಾಹನ ಸಂಚಾರ ಅರ್ಧ ತಾಸಿಗೂ ಹೆಚ್ಚು ಕಾಲ ಅಸ್ತವ್ಯಸ್ತಗೊಂಡಿತಲ್ಲದೇ ಸ್ಥಳೀಯರು ಹಾಗೂ ಸಾರ್ವಜನಿಕರೊಡಗೂಡಿ ಸ್ಥಳೀಯ ಪೊಲೀಸರು ತೀವ್ರವಾಗಿ ಜಖಂಗೊಂಡಿದ್ದ ಕಾರನ್ನು ರಸ್ತೆಬದಿಗೆ ತರುವಲ್ಲಿ ಹರಸಾಹಸ ಪಟ್ಟರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ರಸ್ತೆ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮೃತ ದೇಹಗಳನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು , ಘಟನೆ ಸಂಬಂಧ ಮದ್ದೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ