ಆ್ಯಪ್ನಗರ

'ಆಧುನಿಕ ಭಗೀರಥ' ಕಾಮೇಗೌಡರಿಗೆ ಉಚಿತ ಪಾಸ್‌ ನೀಡಿದ ಕೆಎಸ್‌ಆರ್‌ಟಿಸಿ

​​ಕೆರೆಗಳನ್ನು ನಿರ್ಮಿಸಿ, ಪರಿಸರದ ಬಗ್ಗೆ ಅನನ್ಯ ಕಾಳಜಿ ತೋರುತ್ತಿರುವ ಕಾಮೇಗೌಡರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿ ಶ್ಲಾಘಿಸಿದ್ದರು.

Vijaya Karnataka 2 Jul 2020, 6:37 pm

ಬೆಂಗಳೂರು: ಆಧುನಿಕ ಭಗೀರಥ, ಕೆರೆಗಳ ಮನುಷ್ಯ ಎಂದೇ ಖ್ಯಾತರಾಗಿರುವ ಮಂಡ್ಯ ಜಿಲ್ಲೆy ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಉಚಿತ ಬಸ್‌ ಪಾಸ್‌ ನೀಡಿ ಗೌರವಿಸಿದೆ.
Vijaya Karnataka Web Kamegowda Bus Pass


ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಮಾದರಿಯ ಬಸ್‌ಗಳಲ್ಲಿ ಜೀವಿತಾವಧಿಯವರೆಗೆ ಉಚಿತವಾಗಿ ಸಂಚರಿಸಲು ಬಸ್‌ ಪಾಸ್‌ ವಿತರಿಸಲಾಗಿದೆ. ಕೆಎಸ್‌ಆರ್‌ಟಿಸಿಯ ವಿಶೇಷ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಈ ಬಸ್‌ ಪಾಸನ್ನು ವಿತರಿಸಲಾಗಿದೆ.

ಕೆರೆಗಳನ್ನು ನಿರ್ಮಿಸಿ, ಪರಿಸರದ ಬಗ್ಗೆ ಅನನ್ಯ ಕಾಳಜಿ ತೋರುತ್ತಿರುವ ಕಾಮೇಗೌಡರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಮನ್‌ ಕೀ ಬಾತ್‌’ ಕಾರ್ಯಕ್ರಮದಲ್ಲಿ ಉಲ್ಲೇಖಿಸಿ ಶ್ಲಾಘಿಸಿದ್ದರು. ಇದಕ್ಕೂ ಮೊದಲು ಇವರ ಅಪರೂಪದ ಸಾಧನೆಗೆ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನೂ ನೀಡಿ ಗೌರವಿಸಿತ್ತು.
ಮಂಡ್ಯದ ಕಾಮೇಗೌಡರ ಕುರಿತು ನಿರ್ಮಾಣವಾಗಲಿದೆ ಡಾಕ್ಯುಮೆಂಟರಿ! ಇದರ ನಿರ್ದೇಶಕ ಯಾರು?

ಸ್ವಂತ ಖರ್ಚಿನಲ್ಲಿ 14 ಕೆರೆಗಳನ್ನು ಕಟ್ಟಿದ ಭಗೀರಥ: ಮಂಡ್ಯದ ರೈತನ ಸಾಧನೆಗೆ ಮುಖ್ಯಮಂತ್ರಿ ಮೆಚ್ಚುಗೆ!

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೂಡ ಕಾಮೇಗೌಡರ ಅಪರಿಮಿತ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಉಚಿತ ಬಸ್‌ ಪಾಸ್‌ ನೀಡಲು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಉಚಿತವಾಗಿ ಪಾಸ್‌ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ