ಆ್ಯಪ್ನಗರ

ಪಿಂಡ ಪ್ರದಾನದಲ್ಲಿ ಜಿ.ಪರಮೇಶ್ವರ್‌ ಭಾಗಿ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಸಹೋದರ ಡಾಜಿಶಿವಪ್ರಸಾದ್‌ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಡಾಜಿ...

Vijaya Karnataka 7 Aug 2018, 5:00 am
ಶ್ರೀರಂಗಪಟ್ಟಣ: ಸಹೋದರ ಡಾ.ಜಿ.ಶಿವಪ್ರಸಾದ್‌ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಕುಟುಂಬ ಸಮೇತ ಸೋಮವಾರ ಪಟ್ಟಣಕ್ಕೆ ಆಗಮಿಸಿ ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ಮಾಡಿದರು.
Vijaya Karnataka Web g parameshwar and family participated pinda pradhana event
ಪಿಂಡ ಪ್ರದಾನದಲ್ಲಿ ಜಿ.ಪರಮೇಶ್ವರ್‌ ಭಾಗಿ


ಪಟ್ಟಣ ಹೊರವಲಯದ ತ್ರಿವೇಣಿ ಕಾವೇರಿ ಸಂಗಮದಲ್ಲಿ ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಡಾ.ಜಿ.ಶಿವಪ್ರಸಾದ್‌ ಪುತ್ರ ಆನಂದ್‌ ಅವರು ವೈದಿಕರ ನೇತೃತ್ವದಲ್ಲಿ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಎಲ್ಲ ಕಾರ್ಯಗಳು ಪೂರ್ಣಗೊಳ್ಳುವವರೆಗೆ ಪರಮೇಶ್ವರ್‌ ಉಪಸ್ಥಿತರಿದ್ದರು. ಖಾಸಗಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಪತ್ರಕರ್ತರ ಭೇಟಿಗೆ ಅವಕಾಶ ಇರಲಿಲ್ಲ. ಪಿಂಡ ಪ್ರದಾನ ಕಾರ‍್ಯ ಮುಗಿದ ಬಳಿಕ ವಿಶೇಷ ಬಸ್‌ನಲ್ಲಿ ಕುಟುಂಬ ಸದಸ್ಯರೊಂದಿಗೆ ಖಾಸಗಿ ರೆಸಾರ್ಟ್‌ನಲ್ಲಿ ಭೋಜನ ಮುಗಿಸಿ ತುಮಕೂರಿಗೆ ಪ್ರಯಾಣ ಬೆಳೆಸಿದರು. ಎಸ್‌ಪಿ ರಾಧಿಕಾ ನೇತೃತ್ವದಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ